Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಕನಕ ನೌಕರರ ಸಂಘದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ,

ಸಿಂಧನೂರು: ಜಿಲ್ಲಾ ಕನಕ ನೌಕರರ ಸಂಘದಿಂದ ಸಿಂಧನೂರಿನಲ್ಲಿ ಮೊಟ್ಟಮೊದಲ ಬಾರಿಗೆ  ರಾಯಚೂರು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರವನ್ನು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕನಕಮಂಗಲ ಭವನದಲ್ಲಿ ಆಗಸ್ಟ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಬಸಪ್ಪ ಹ್ಯಾಟಿ ಹೇಳಿದರು.


ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ 7 ತಾಲೂಕಿನಿಂದ ರಾಯಚೂರು ಜಿಲ್ಲಾ ಕನಕ ನೌಕರರ ಸಂಘವು ಪ್ರತಿ ವರ್ಷವೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸುತ್ತಾ ಬಂದಿದ್ದು, 2023-24 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಪಡೆದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ, ಹಾಗೂ ಡಿಪ್ಲೊಮಾ ಪದವಿಗಳಲ್ಲಿ ಬಂಗಾರ ಪದಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, 2023-24 ರಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ಮತ್ತು ನೌಕರರಿಗೆ ವಿಶೇಷ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.


ಕಾಗಿನೆಲೆ ಕನಕಗುರು ಪೀಠ ತಿಂಥಣಿ ಬ್ರಿಡ್ಜ್ ನ ಪರಮಪೂಜ್ಯ ಶ್ರೀ ಶ್ರೀ ಸಿದ್ದರಾಮನಂದಪುರಿ ಮಹಾಸ್ವಾಮಿಗಳು, ಸಿಂಧನೂರು ಸುಕಾಲಪೇಟೆಯ ನಂಜುಂಡಯ್ಯ ಗುರುವಿನ್, ತುರ್ವಿಹಾಳ ಅಮೋಘ ರೇವಣಸಿದ್ದೇಶ್ವರ ಮಠದ ಶ್ರೀ ಮಾದಯ್ಯ ಗುರುವಿನ್, ಶ್ರೀ ಚಿದಾನಂದಯ್ಯ ಗುರುವಿನ್, ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.


ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಉದ್ಘಾಟಿಸಲಿದ್ದಾರೆ. ರಾಜ್ಯ ಕುರುಬರ ಸಂಘದ ಅಧ್ಯಕ್ಷರು, ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರು, ಜನಪ್ರತಿನಿಧಿಗಳು, ಸಮಾಜದ ಮುಖಂಡರು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.ಈ ಸಂದರ್ಭದಲ್ಲಿ: ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ಜಾಲಿಬೆಂಚಿ, ತಾಲೂಕು ಅಧ್ಯಕ್ಷ ಮಲ್ಲಪ್ಪ ಬಸ್ಸಾಪುರ, ಶಿಕ್ಷಕ ವೀರೇಶ ಸಾಸಲಮರಿ, ಸೇರಿದಂತೆ ಅನೇಕರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ