Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಗ್ಯಾರಂಟಿ ಯೋಜನೆಗಳ ಪ್ರಚಾರದ ವಾಹನಕ್ಕೆ ಚಾಲನೆ ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಮಟ್ಟ ಸುಧಾರಣೆ: ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ


ಬಳ್ಳಾರಿ,ಫೆ.22



ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್‌ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಬಡ ಜನರು, ಮಧ್ಯಮ ವರ್ಗದ ಜನರ ಆರ್ಥಿಕ ಮಟ್ಟವನ್ನು ಸುಧಾರಿಸಲು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದಲ್ಲಿ ಆರ್ಥಿಕ ಶಕ್ತಿ ತುಂಬಿದ್ದಾರೆ ಎಂದರು.

ರಾಜ್ಯದಲ್ಲಿ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳನ್ನು ಶೇ.98 ರಷ್ಟು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಶೇ.100 ರಷ್ಟು ಅನುಷ್ಠಾನಗೊಳಿಸಲು ಯೋಜನೆಗಳ ಅರಿವು ಅಗತ್ಯವಾಗಿದೆ. ಹಾಗಾಗಿ ಎಲ್‌ಇಡಿ ವಾಹನವು ಬೀದಿ ನಾಟಕ ಕಾರ್ಯಕ್ರಮ ಆಯೋಜಿಸುವ ಕಲಾವಿದರ ತಂಡದೊAದಿಗೆ ಜಿಲ್ಲೆಯ ಆಯ್ದ 20 ಗ್ರಾಮಗಳಲ್ಲಿ ಸಂಚರಿಸಿ ಗ್ರಾಮೀಣ ಭಾಗದ ಜನರಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದು ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಯಾವುದೇ ಮಧ್ಯವರ್ತಿಗಳಿಲ್ಲದೇ ಜನರಿಗೆ ತಲುಪಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಯಾರೂ ವಂಚಿತರಾಗಬಾರದು. ಅರ್ಹರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು. ಇದಕ್ಕಾಗಿ ಗ್ಯಾರಂಟಿ ಯೋಜನೆಗಳ ಕುರಿತ ಅರಿವು ಬಹುಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಮೂಡಿಸಬೇಕು ಎಂದರು.

ಗೃಹಲಕ್ಷಿö್ಮ ಯೋಜನೆಯ ಕಳೆದ 16 ತಿಂಗಳ ಎಲ್ಲಾ ಕಂತಿನ ಹಣವನ್ನು ಗೃಹಲಕ್ಷಿö್ಮÃಯರ ಖಾತೆಗೆ ಜಮೆ ಮಾಡಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕಳೆದ 3 ತಿಂಗಳ ಗೃಹಲಕ್ಷಿ ಹಣ ಬಂದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು, ಇಲಾಖಾ ಸಚಿವರು ಮುಂದಿನ ದಿನಗಳಲ್ಲಿ ಹಣ ಪಾವತಿಸುವ ಕುರಿತು ತಿಳಿಸಿದ್ದಾರೆ ಎಂದರು.

ಅದೇರೀತಿಯಾಗಿ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯ ಬದಲಾಗಿ ನೀಡುವ ಹಣವು ಜಮೆಯಾಗಿಲ್ಲ. ಬಾಕಿ ಇರುವ ಹಣ ಪಾವತಿ ಜೊತೆಗೆ ಮುಂದಿನ ತಿಂಗಳಿನಿAದ ಎಲ್ಲಾ ಅರ್ಹ ಪಡಿತರಿಗೆ ಕೊಟ್ಟ ಮಾತಿನಂತೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ಕಡ್ಡಾಯವಾಗಿ ತಲುಪಿಸಬೇಕೆಂಬ ಬದ್ಧತೆಯನ್ನು ಹೊಂದಿದೆ. ತಲುಪಿಸುವಲ್ಲಿ ವಿಳಂಬವಾಗಬಹುದು. ಈ ಕುರಿತು ಜನರು ಉಹಾಪೋಹಗಳಿಗೆ ಕಿವಿಕೊಡಬಾರದು ಎಂದರು.

ಈ ವೇಳೆ ಮುಖಂಡರಾದ ವೆಂಕಟೇಶ್ ಹೆಗಡೆ, ಲಿಂಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ, ಸಿಬ್ಬಂದಿ ಹನುಮೇಶ್.ಹೆಚ್., ಕಲಾವಿದರಾದ ಎಸ್.ಎಂ.ಹುಲುಗಪ್ಪ, ಹೆಚ್.ಜಿ.ಸುಂಕಪ್ಪ, ಡಿ.ಹೇಮಂತ್, ರ್ರಿಸ್ವಾಮಿ, ಹನುಮಯ್ಯ ತಿಮ್ಮಲಾಪುರ ಹಾಗೂ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ