Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ: ಡಾ: ಕುಮಾರ

 

ಬೇಸಿಗೆ ಕಾಲ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿಸ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂನ್ ಮಾಹೆಯಲ್ಲಿ ಮಳೆ ಬರುವ ಸಾಧ್ಯತೆ ಇದ್ದು, ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ಕುಡಿಯುವ ನೀರಿನ ಒದಗಿಸುವ ಬಗ್ಗೆ ಮೊದಲ ಆದ್ಯತೆ ನೀಡಿ ಎಂದರಯ.

ತಹಶೀಲ್ದಾರ್ ಹಾಗೂ ತಾಲ್ಲೂಕು‌ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಗ್ರಾಮಗಳನ್ನು ಪಟ್ಟಿ ಮಾಡಿಕೊಳ್ಳಬೇಕು. ಬಹು ಗ್ರಾಮ ಕುಡಿಯುವ ನೀರು, ಜೆ.ಜೆ.ಎಂ ಸೇರಿದಂತೆ ವಿವಿಧ ಯೋಜನೆಗಳು ಅನುಷ್ಠಾನಗೊಳಿಸಲಾಗುತ್ತಿದ್ದು, ಕುಡಿಯುವ ನೀರಿನ ತೊಂದರೆ ಇರುವ ಗ್ರಾಮವನ್ನು ಸ್ಥಳ ಭೇಟಿ ಮಾಡಿ ನಿಖರವಾಗಿ ಪಟ್ಟಿ ಮಾಡಿಕೊಳ್ಳಿ ಎಂದರು.

ಟ್ಯಾಂಕರ್ ನಲ್ಲಿ ನೀರು ಕೊಡುವುದು ಕೊನೆಯ ಹಂತವಾಗಿರುತ್ತದೆ. ಮೊದಲ ಹಂತದಲ್ಲಿ ಕುಡಿಯುವ ನೀರಿನ ತೊಂದರೆಯಾದಲ್ಲಿ ಇರುವ ಬೋರ್ ವೆಲ್ ಗಳನ್ನು ಫ್ಲಷಿಂಗ್ ಹಾಗೂ ಡೀಪ್ನಿಂಗ್ ಮಾಡಿಕೊಳ್ಳಬೇಕು ಎಂದರು.

ಕುಡಿಯುವ ನೀರಿನ ತೊಂದರೆ ಇರುವ ಗ್ರಾಮಗಳ ವ್ಯಾಪ್ತಿಯಲ್ಲಿರುವ ಖಾಸಗಿ ಬೋರ್ ವೆಲ್ ಗಳನ್ನು ಪಟ್ಟಿ ಮಾಡಿಕೊಳ್ಳಿ. ಖಾಸಗಿ ಬೋರ್ ವೆಲ್ ಗಳಿಂದ ನೀರು ಪಡೆಯುವ ಸಂದರ್ಭದಲ್ಲಿ ಬೋರ್ ವೆಲ್ ನಲ್ಲಿ ನೀರಿನ ಪ್ರಮಾಣವನ್ನು ಗ್ರಾಮೀಣ ಕುಡಿಯುವ‌ ನೀರಿನ ಇಲಾಖೆ ಇಂಜಿನಿಯರ್ ನಿಂದ ದೃಢೀಕರಣ ಪಡೆದುಕೊಳ್ಳಬೇಕು. ಖಾಸಗಿ ಬೋರ್ ವೆಲ್ ಮಾಲೀಕರಿಂದ ನೀರು ಪಡೆಯುವ ದಿನಾಂಕದಿಂದ ಒಪ್ಪಂದ‌ ಮಾಡಿಕೊಳ್ಳಬೇಕು. ನೀರು ಕೊಡುವ ಸಂದರ್ಭದಲ್ಲಿ ನೀರನ್ನು ಪರೀಕ್ಷೆಗೆ ಒಳಪಡಿಸಿ. ಆಗ ಬಿಲ್ ಪಾವತಿಗೆ ತೊಂದರೆಯಾಗುವುದಿಲ್ಲ ಎಂದರು.

ಟ್ಯಾಂಕರ್ ಮೂಲಕ ನೀರು ಪಡೆಯುವುದು ಕೊನೆಯ ಆದ್ಯತೆ ಆಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಟೆಂಡರ್ ಕರೆದು ದರ ಪಡೆದುಕೊಳ್ಳಿ. ಅಗತ್ಯವಿದ್ದರೆ ಕಾರ್ಯಾದೇಶ ನೀಡಿ ನೀರು ಪಡೆದುಕೊಳ್ಳಬಹುದು ಎಂದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಿ. ಬಿಸಿಲು ಹೆಚ್ಚಿರುವುದರಿಂದ ಬಿಸಿ ಗಾಳಿ ಸಂದರ್ಭದಲ್ಲಿ ವಹಿಸಬೇಕಾದ ಎಚ್ಚರಿಕೆ ಕುರಿತು ಆರೋಗ್ಯ ಇಲಾಖೆಯಿಂದ ಹೆಚ್ಚು ಹೆಚ್ಚು ಐ.ಇ.ಸಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಮನ್ವಯತೆ ಅತಿ ಮುಖ್ಯ. ಅನುದಾನದ ಕೊರತೆ ಇಲ್ಲ, ನಿಗದಿತ ಸಮಯಕ್ಕೆ ಬಿಲ್ ಪಾವತಿಯಾಗಬೇಕು ಎಂದರು.

ಜಲ್ ಜೀವನ್ ಮಿಷನ್ ಯೋಜನೆಯಡಿ ಬೋರ್ ವೆಲ್ ಗಳು ಲಭ್ಯವಿದ್ದು, ಅವುಗಳಿಗೆ ಚೆಸ್ಕಂ ಸಹಾಯದಿಂದ ವಿದ್ಯುತ್ ವ್ಯವಸ್ಥೆ ಮಾಡಿದರೆ ಬಹಳಷ್ಟು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಸಂಸ್ಥೆಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಸಿ ಕಸ ,ಒಣ ಕಸ ಪ್ರತ್ಯೇಕ ಮಾಡಿ ವಿಲೇವಾರಿ ಮಾಡಿ. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ವಚ್ಛಗೊಳಿಸಿ ನೀರನ್ನು ಪರಿಶೀಲಿಸಿ. ಇದರಿಂದ ಸಾಂಕ್ರಮಿಕ ರೋಗಗಳು ಹರಡದಂತೆ ತಡೆಗಟ್ಟಬಹುದು. ಗ್ರಾಮೀಣ ಭಾಗದ ಒವರ್ ಹೆಡ್ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಗ್ರಾಮೀಣ ಕುಡಿಯುವ ನೀರಿನ ಇಲಾಖೆಯ ಕಾರ್ಯಾಪಾಲಕ ಅಭಿಯಂತರ ಪ್ರಮೋದ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು