Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ 12 ರಿಂದ 15 ರವರೆಗೆ ನಶಾ ಮುಕ್ತ ಭಾರತ ಅಭಿಯಾನ

ಚಿತ್ರದುರ್ಗಆ.09:

78ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 12 ರಿಂದ 15 ವರೆಗೆ ನಶಾ ಮುಕ್ತ ಭಾರತ ಅಭಿಯಾನ ಆಯೋಜಿಸಲಾಗಿದೆ. ಇದರ ಅಂಗವಾಗಿ ಆಗಸ್ಟ್ 12 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಮಹಾವಿದ್ಯಾಲಯ, ತಾಂತ್ರಿಕ ಹಾಗೂ ವೈದ್ಯಕೀಯ ಮಹಾವಿದ್ಯಾಲಯ, ಐಟಿಐ, ಐಐಎಂಎಸ್, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞಾ ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಾಲಾ ಕಾಲೇಜು ಆವರಣಗಳಲ್ಲಿ ನಶಾ ಮುಕ್ತ ಭಾರತ ಅಭಿಯಾನದ ನೆನಪಿನ ಪ್ರಯುಕ್ತ ಸಸಿಗಳನ್ನು ನೆಡುವುದು. ಆಗಸ್ಟ್ 15 ವರೆಗೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿಚಾರಗೋಷ್ಠಿ, ಕಾರ್ಯಾಗಾರ, ರ್ಯಾಲಿ, ಮ್ಯಾರಥಾನ್ ಹಾಗೂ ಬೀದಿ ನಾಟಕಗಳನ್ನು ಪ್ರಸ್ತುತ ಪಡಿಸಲಾಗುವುದು.

ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಗಳ ಭಾಷಣದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದ್ದಾರೆ.

ಕಾರ್ಯಕ್ರಮಗಳನ್ನು ಆಯೋಜಿಸಿರುವ ಕುರಿತು ಪೋಟೊ ವಿಡಿಯೋ ಹಾಗೂ ವರದಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಇ-ಮೇಲ್ ಐಡಿ [email protected] ಅಥವಾ ವಾಟ್ಸ್ಪ್ ಸಂಖ್ಯೆ 9731282405 ಕಳುಹಿಸಲು ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ