Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು,ಆ.26,- ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬoಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಗಳಿ0ದ ಆಹಾರ ಧಾನ್ಯಗಳನ್ನು ಪಡೆಯುವ ಅಂಗಡಿಯಲ್ಲಿ ಇದೇ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/sಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸುವಂತೆ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸುವಂತೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ತಿಳಿಸಲಾಗಿದೆ.  ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಉಪ ನಿರ್ದೇಶಕರ ಕಚೇರಿಯ ಖಿoಟಟ ಈಡಿee ದೂರಾವಾಣಿ ಸಂಖ್ಯೆ:1967ಗೆ ಮತ್ತು ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು