Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರಸ್ನೇಹಿ ಮಾರ್ಗೋಪಾಯ, ಸಂಪನ್ಮೂಲಗಳನ್ನೇ ಬಳಿಕೆ

ಮರಿಯಮ್ಮನಹಳ್ಳಿ:ಪರಿಸರಸ್ನೇಹಿ ಮಾರ್ಗೋಪಾಯ, ಸಂಪನ್ಮೂಲಗಳನ್ನೇ ಬಳಿಕೆ ಮಾಡಿಕೊಂಡು ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗಾಗಿ ಗಿಡಗಳನ್ನು ನೆಡುವ ಮೂಲಕ ವಾತವರಣದಲ್ಲಿ ತಾಪಮಾನ ತಂಪಾಗಿಸುವ ಜೊತೆಗೆ ಆರೋಗ್ಯಕರ ಜೀವನ ಸಾಗಿಸಲು ಸಾಧ್ಯವಾಗಲಿದೆ ಎಂದು ಬಿಎಂಎಂ ಇಸ್ಪಾತ್ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಮಲ್ ಸಿಂಗ್ ಹೇಳಿದರು.
ಸಮೀಪದ ಡಣಾಪುರಬಳಿಯ ಬಿಎಂಎಂ ಇಸ್ಪಾತ್ ಲಿಮಿಟೆಡ್ ಕಾರ್ಖಾನೆಯ ಆವರಣದಲ್ಲಿ ನಡೆದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿನೆಟ್ಟು ಉದ್ಘಾಟಿಸಿ ಮಾತನಾಡಿದರು.
  ಪರಿಸರ ಸಮತೋಲನ ಕಾಪಾಡಲು ಹೆಚ್ಚು ಹೆಚ್ಚು ಸಸಿಗಳನ್ನು ನೆಟ್ಟು,ಅವುಗಳನ್ನು ಪಾಲನೆ,ಪೋಷಣೆ ಮಾಡಿ ಮರಗಳಾಗಿ ಬೆಳಸುವ ಮೂಲಕ ಗಿಡಗಳನ್ನು ಸಂರಕ್ಷಣೆ ಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದರು.
ಬಿಎಂಎಂ ಇಸ್ಪಾತ್ ಲಿಮಿಟೆಡ್‍ನ ಉಪಾಧ್ಯಕ್ಷ ಮನೀಶ್ ಡಿ.ವರ್ಣಿಕರ್ ಮಾತನಾಡಿ,ನಮ್ಮ ಕಾರ್ಖಾನೆಯಲ್ಲಿ ಪ್ರತಿಯೊಬ್ಬರಲ್ಲಿಯೂ ಪರಿಸರ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.ಪ್ರತಿಯೊಬ್ಬರಲ್ಲಿಯೂ ಪರಿಸರಕುರಿತು ಜಾಗೃತಿ ಮೂಡಿಸುವುದು. ಪರಿಸರ ಜಾಗೃತಿಕುರಿತು ವಿವಿಧ ಸ್ಪರ್ಧೆಗಳನ್ನು ನಡೆಸಿ ಅವುಗಳಲ್ಲಿ ವಿಜೇತರಾದವರಿಗೆ ನಮ್ಮ ಕಂಪನಿಯಿಂದ ಬಹುಮಾನಗಳನ್ನು ವಿತರಿಸಲಾಗುತ್ತದೆ. ನಮ್ಮ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರ ಜನ್ಮದಿನದಂದು ಅವರ ಹೆಸರಲ್ಲಿ ಒಂದು ಗಿಡವನ್ನು ನೆಟ್ಟು ಅವುಗಳನ್ನು ಪೋಷಿಸಲಾಗುತ್ತಿದೆ ಎಂದರು.
  ಬಿಎಂಎಂ ಇಸ್ಪಾತ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಮುಖ್ಯಹಣಕಾಸು ಅಧಿಕಾರಿ ವಿ.ವಿ.ವಿ. ರಾಜು ಮಾತನಾಡಿ,ಗಿಡಮರಗಳು ಮನುಷ್ಯನಿಗೆ ಸಾಕಷ್ಟು ಸಹಾಯ ಮಾಡುತ್ತವೆ. ಶುದ್ದ ಗಾಳಿ ನೀಡುತ್ತದೆ. ಪರಿಸರ ಮಾಲಿನ್ಯ ತಡೆಯುತ್ತದೆ.ಈ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಬಿಎಂಎಂ ಇಸ್ಪಾತ್ ಲಿಮಿಟೆಡ್‍ನಿಂದ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನಡೆಸಲಾಗುತ್ತದೆ ಎಂದರು.
ಬಿಎಂಎಂ ಕಂಪನಿಯ ವೈದ್ಯಾಧಿಕಾರಿ ಡಾ. ಪಿ. ವಿಜಯವೆಂಕಟೇಶ್,ಪರಿಸರ ಅಧಿಕಾರಿ ನಾಗವಾಸು ಸೇರಿದಂತೆ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು,ಸಂಸ್ಥೆಯ ಸಿಬ್ಬಂದ್ದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು