Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ.01, 02 ರಂದು ಶಿಕ್ಷಣ ಸಮಾವೇಶ ಕಾರ್ಯಾಗಾರ; ನೋಂದಣಿಗೆ ಆಹ್ವಾನ





ಬಳ್ಳಾರಿ

ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜೆಎಸ್ಡಬ್ಲ್ಯೂ ಫೌಂಡೇಶನ್ ವತಿಯಿಂದ ‘ಎಡುಕಾನ್-2024, ಕೈಜೋಡಿಸಿ ಕಲಿಸೋಣ' ಎಂಬ ವಿಷಯದೊಂದಿಗೆ ಆಗಸ್ಟ್ 01 ಮತ್ತು 02 ರಂದು ತೋರಣಗಲ್ಲಿನ ಜೆಎಸ್ಡಬ್ಲ್ಯೂನ ವಿದ್ಯಾನಗರದ ಜೆ-ಮ್ಯಾಕ್ಸ್ ಹಾಲ್ನಲ್ಲಿ ಶಿಕ್ಷಣ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.

ಗುಣಾತ್ಮಕ ಶಿಕ್ಷಣಕ್ಕಾಗಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನವೀನ ವಿಧಾನಗಳ ಮೂಲಕ ಪರಿವರ್ತನೆಯನ್ನು ತರಲು ಶಿಕ್ಷಣ ತಜ್ಞರು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಭಾಗಿದಾರರನ್ನು ಒಗ್ಗೂಡಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.

ಸಮಾವೇಶದಲ್ಲಿ ಭಾಗವಹಿಸಲು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ ಅಥವಾ ವೆಬ್ಸೈಟ್ https://cpikalaburgi.karnataka.gov.in ಇಲ್ಲಿ ನೋಂದಾಯಿಸಿಕೊಳ್ಳಬಹುದು.

ಕಾರ್ಯಕ್ರಮದ ವಿವರವಾದ ವೇಳಾಪಟ್ಟಿಯನ್ನು ನಂತರ ತಿಳಿಸಲಾಗುವುದು. ಸೀಮಿತ ಸಾಮಥ್ರ್ಯದ ವಸತಿ ಸೌಲಭ್ಯದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೋಂದಣಿಗೆ ಜುಲೈ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನೋಡಲ್ ವ್ಯಕ್ತಿಗಳಾದ ತೋರಣಗಲ್ಲಿನ ಜೆಎಸ್ಡಬ್ಲ್ಯೂ ಫೌಂಡೇಶನ್ ಸಿಎಸ್ಆರ್ನ ಹಿರಿಯ ವ್ಯವಸ್ಥಾಪಕ ರಾಜಶೇಖರ ರಾಜು ಅವರ ಮೊ.9989833133 ಮತ್ತು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಮುಧೋಳ ಅವರ ಮೊ.8310259380 ಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ