Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ.01, 02 ರಂದು ಶಿಕ್ಷಣ ಸಮಾವೇಶ ಕಾರ್ಯಾಗಾರ; ನೋಂದಣಿಗೆ ಆಹ್ವಾನ





ಬಳ್ಳಾರಿ

ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜೆಎಸ್ಡಬ್ಲ್ಯೂ ಫೌಂಡೇಶನ್ ವತಿಯಿಂದ ‘ಎಡುಕಾನ್-2024, ಕೈಜೋಡಿಸಿ ಕಲಿಸೋಣ' ಎಂಬ ವಿಷಯದೊಂದಿಗೆ ಆಗಸ್ಟ್ 01 ಮತ್ತು 02 ರಂದು ತೋರಣಗಲ್ಲಿನ ಜೆಎಸ್ಡಬ್ಲ್ಯೂನ ವಿದ್ಯಾನಗರದ ಜೆ-ಮ್ಯಾಕ್ಸ್ ಹಾಲ್ನಲ್ಲಿ ಶಿಕ್ಷಣ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.

ಗುಣಾತ್ಮಕ ಶಿಕ್ಷಣಕ್ಕಾಗಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನವೀನ ವಿಧಾನಗಳ ಮೂಲಕ ಪರಿವರ್ತನೆಯನ್ನು ತರಲು ಶಿಕ್ಷಣ ತಜ್ಞರು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಭಾಗಿದಾರರನ್ನು ಒಗ್ಗೂಡಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.

ಸಮಾವೇಶದಲ್ಲಿ ಭಾಗವಹಿಸಲು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ ಅಥವಾ ವೆಬ್ಸೈಟ್ https://cpikalaburgi.karnataka.gov.in ಇಲ್ಲಿ ನೋಂದಾಯಿಸಿಕೊಳ್ಳಬಹುದು.

ಕಾರ್ಯಕ್ರಮದ ವಿವರವಾದ ವೇಳಾಪಟ್ಟಿಯನ್ನು ನಂತರ ತಿಳಿಸಲಾಗುವುದು. ಸೀಮಿತ ಸಾಮಥ್ರ್ಯದ ವಸತಿ ಸೌಲಭ್ಯದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೋಂದಣಿಗೆ ಜುಲೈ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನೋಡಲ್ ವ್ಯಕ್ತಿಗಳಾದ ತೋರಣಗಲ್ಲಿನ ಜೆಎಸ್ಡಬ್ಲ್ಯೂ ಫೌಂಡೇಶನ್ ಸಿಎಸ್ಆರ್ನ ಹಿರಿಯ ವ್ಯವಸ್ಥಾಪಕ ರಾಜಶೇಖರ ರಾಜು ಅವರ ಮೊ.9989833133 ಮತ್ತು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಮುಧೋಳ ಅವರ ಮೊ.8310259380 ಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು