Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣಾ ವೇಳಾಪಟ್ಟಿ ಪ್ರಕಟ





ಬಳ್ಳಾರಿ,ಡಿ.20

ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಕ್ಷೇತ್ರದಿಂದ ಚುನಾಯಿತ ಸದಸ್ಯರನ್ನು ಆಯ್ಕೆ ಮಾಡುವ ಸಂಬAಧ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 310ರ ಪ್ರಕಾರ ಜಿಲ್ಲಾ ಯೋಜನಾ ಸಮಿತಿ ರಚಿಸಬೇಕಾಗಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ನಿಯಮಗಳು 1996ರ 8ರ ನಿಯಮದ ಪ್ರಕಾರ ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಮತಕ್ಷೇತ್ರಗಳಿಂದ ಪ್ರತ್ಯೇಕವಾಗಿ ಸದಸ್ಯರ ಆಯ್ಕೆ ಕುರಿತು ಚುನಾವಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

*ಚುನಾವಣಾ ವೇಳಾಪಟ್ಟಿ:*

ಪುರಸಭಾ ಕ್ಷೇತ್ರದಿಂದ ಚುನಾಯಿಸಬೇಕಾದ ಸದಸ್ಯರುಗಳ ಸಂಖ್ಯೆ: ಪುರಸಭಾ ಕ್ಷೇತ್ರದಿಂದ - 23 ಸದಸ್ಯರು (ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಚುನಾಯಿತ ಸದಸ್ಯರುಗಳು).

ನಾಮಪತ್ರ ಸ್ವೀಕರಿಸುವ ದಿನಾಂಕ, ಸಮಯ ಮತ್ತು ಸ್ಥಳ(ಸಾರ್ವಜನಿಕ ರಜಾದಿನ ಹೊರತುಪಡಿಸಿ): ಡಿ.22 ರಿಂದ 31 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 03 ಗಂಟೆಯವರೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.

ನಾಮಪತ್ರ ಪರಿಶೀಲಿಸುವ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026 ರ ಜನವರಿ 02 (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.

ನಾಮಪತ್ರ ಹಿಂಪಡೆಯುವ ಕೊನೆ ದಿನಾಂಕ, ದಿನ ಮತ್ತು ಸಮಯ: 2026 ರ ಜನವರಿ 05 (ಸೋಮವಾರ) ಮಧ್ಯಾಹ್ನ 03 ಗಂಟೆಯವರೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.

ಮತದಾನ ಅಗತ್ಯವಾದಲ್ಲಿ ಮತದಾನ ನಡೆಸಬೇಕಾದ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026 ರ ಜನವರಿ 12(ಸೋಮವಾರ) ಬೆಳಿಗ್ಗೆ 09 ರಿಂದ ಸಂಜೆ 04 ರ ವರೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣ.

ಮತ ಎಣಿಕೆ ದಿನಾಂಕ, ಸಮಯ ಮತ್ತು ಸ್ಥಳ: 2026 ರ ಜನವರಿ 12(ಸೋಮವಾರ) ಸಂಜೆ 05 ಗಂಟೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣ.

2026 ರ ಜನವರಿ 13 (ಮಂಗಳವಾರ) ಸಂಜೆ 05 ಗಂಟೆಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.

--------------

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು