Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಶಾಭಿಮಾನ ಹೆಚ್ಚಿಸಿದ ತಿಂಗಳ ಸೊಬಗು ಸಾಂಸ್ಕೃತಿಕ ಕಾರ್ಯಕ್ರಮ


ಬಳ್ಳಾರಿ,ಆ.13



ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿ ಇವರ ವತಿಯಿಂದ ಸೋಮವಾರ ಸಂಜೆ ಆಯೋಜಿಸಲಾಗಿದ್ದ “ತಿಂಗಳ ಸೊಬಗು” ಸಾಂಸ್ಕೃತಿಕ ಕಾರ್ಯಕ್ರಮ ಸಾರ್ವಜನಿಕರಲ್ಲಿ ದೇಶಾಭಿಮಾನ ಮೂಡಿಸಿತು.

ನಗರದ ಡಾ.ರಾಜಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮoದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶಭಕ್ತಿಯ ಲಹರಿ ಹರಿಯುತಿತ್ತು.

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರನ್ನೂ ಆಕರ್ಷಿಸಿತು. ದೇಶಭಕ್ತಿ ಗೀತೆಗಳ ಗಾಯನ ಮತ್ತು ಸಂಗೀತಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಚಿಣ್ಣರ ಕಲಾನೃತ್ಯಕ್ಕೆ ಕಲಾಭಿಮಾನಿಗಳು ಚಪ್ಪಾಳೆಯ ಸುರಿಮಳೆಗೈದರು.


ಬಳ್ಳಾರಿಯ ಮೂನ್ ವಾಕರ್ಸ್ ಸಾಂಸ್ಕೃತಿಕ ಕಲಾ ಸಂಘದ ದೇಶಭಕ್ತಿ ಗೀತೆಗಳ ಸಮೂಹ ನೃತ್ಯಕ್ಕೆ ಹಿರಿಯರು- ಕಿರಿಯರೆನ್ನದೇ ಪ್ರತಿಯೊಬ್ಬರು ದೇಶಾಭಿಮಾನದಲ್ಲಿ ಲೀನವಾಗಿದ್ದರು.

ಬಳಿಕ ಬಳ್ಳಾರಿ ತಾಲ್ಲೂಕಿನ ಶಂಕರಬoಡೆ ಗ್ರಾಮದ ಪಿ.ಹೊನ್ನೂರ್‌ಸಾಬ್ ಮತ್ತು ಸಂಗಡಿಗರ “ರಾಮಾಯಣ” ಬಯಲಾಟ ಸನ್ನಿವೇಶಗಳನ್ನು ಪಾತ್ರಧಾರಿಗಳು ಕಲಾ ಪ್ರೇಕ್ಷಕರ ಕಣ್ಣಂಚಿನಲ್ಲಿ ಕಟ್ಟಿದಂತಹ ಅಭಿನಯ ಪಾತ್ರಗಳು ಭರಪೂರ ಮನರಂಜನೆ ನೀಡಿತು.

ಸಾಂಸ್ಕೃತಿಕ ಸೊಬಗು ಸವಿಯಲು ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಅಧಿಕಾರಿಗಳು, ಇಲಾಖೆಯ ಸಿಬ್ಬಂದಿ ಹಾಗೂ ನಗರವಾಸಿಗಳು ಉಪಸ್ಥಿತರಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು