Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಂದು ದೇಶದಲ್ಲಿ ಸಾಂಪ್ರದಾಯಿಕ ಆರೋಗ್ಯದ ಸೂತ್ರಗಳಿವೆ: ಡಾ.ವೆಂಕಟ ನಾರಾಯಣ ಜೋಶಿ

ಬಳ್ಳಾರಿ,ಜ.03

ಪ್ರತಿ ದೇಶಕ್ಕೂ ತಮ್ಮದೇ ಆದ ಸಾಂಪ್ರದಾಯಿಕ ಆರೋಗ್ಯದ ಸೂತ್ರಗಳಿವೆ. 95ಕ್ಕೂ ಹೆಚ್ಚು ಪಶ್ಚಿಮ ದೇಶಗಳಲ್ಲಿ ವಿವಿಧ ಔಷಧ ದ್ರವ್ಯಗಳ ವ್ಯಾಪಾರ ವಹಿವಾಟು ನಡೆಯುತ್ತಿವೆ ಎಂದು ಲಂಡನ್ ಆಯುರ್ವೇದ ಅಕಾಡೆಮಿಯ ನಿರ್ದೇಶಕ ಡಾ.ವೆಂಕಟ ನಾರಾಯಣ ಜೋಶಿ ಅವರು ಹೇಳಿದರು.
ತಾರಾನಾಥ ಹಳೆಯ ವಿದ್ಯಾರ್ಥಿಗಳ ಸಂಘ, ನಿಮಾ ಬಳ್ಳಾರಿ ಮತ್ತು ನಿಮಾ ಮಹಿಳಾ ವೇದಿಕೆ ಸಹಭಾಗಿತ್ವದಲ್ಲಿ ನಗರದ ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಮಂಥನ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ “ಯುರೋಪ್ ಮತ್ತು ಯುಕೆಯಲ್ಲಿ ಆಯುರ್ವೇದ” ವಿಷಯದ ಮೇಲೆ ಒಂದು ದಿನದ “ತಜ್ಞರ ತರಬೇತಿ ಕಾರ್ಯಕ್ರಮ”ದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.
ಪಶ್ಚಿಮ ದೇಶಗಳಲ್ಲಿ ಶಿವಲಿಂಗಿ ಮತ್ತು ಪುತ್ರಂಜೀವ ಬೀಜಗಳ ಸಂರಕ್ಷಣೆ ಮತ್ತು ಮಾರಾಟ ಮಾಡಲಾಗುತ್ತಿದೆ. ದೇವದಾರುವಿನ ಸುಗಂಧ ಸಾರವನ್ನು ಪುರುಷ ಬಂಜೆತನದಲ್ಲಿ ಉತ್ತರ ಬಸ್ತಿಯ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಅಮೃತ ಸತ್ವವು ಏಡ್ಸ್ ಚಿಕಿತ್ಸೆಯಲ್ಲಿ ಸಹಾಯಕವಾಗಿದೆ. ನಿರ್ಗುಂಡಿ, ಕಡಲ ಬೆಳ್ಳುಳ್ಳಿ ಮತ್ತು ಮರಿಚಾ ಇತ್ಯಾದಿ ಔಷಧೀಯ ಸಸ್ಯಗಳು ಯೂರೋಪ್‌ನಲ್ಲಿ ಲಭ್ಯವಿವೆ ಮತ್ತು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ತಯಾರಿಸಲಾದ ಸ್ವಯಂ ಔಷಧಿಗಳು ಪರಿಣಾಮಕಾರಿಯಾಗಿವೆ ಎಂದರು.
ಲಂಡನ್ ಮತ್ತು ಯುಕೆಯಲ್ಲಿ ಆಯುರ್ವೇದದ ವ್ಯಾಪ್ತಿ ಮತ್ತು ವಿಶ್ವಮಟ್ಟದ ಆರೋಗ್ಯ ಸೇವೆಗಳ ಭವಿಷ್ಯದ ಯೋಜನೆಗಳ ಕುರಿತು ವಿವರಿಸಿದರು.
ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದಲ್ಲಿ ನೂತನವಾಗಿ ಅನುಸಂಧಾನ, ಹೊಸಪರಿಕಲ್ಪನೆ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಲಾಯಿತು.
ಈ ವೇಳೆ ಆಯುಷ್ ಇಲಾಖೆಯ ಮಾಜಿ ಜಂಟಿ ನಿರ್ದೇಶಕ ಡಾ.ಎನ್.ಎ.ಮೂರ್ತಿ, ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಡಾ.ಜಿ.ಆರ್.ವಸ್ತçದ್, ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಮಾಧವ ದಿಗ್ಗಾವಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ತಿತರಿದ್ದರು.
-----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ