Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ





ಬಳ್ಳಾರಿ,ಜೂ.02

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು ಯಶಸ್ವಿಯಾಗಿ ನಡೆಯುತ್ತಿದೆ.

ಇದರ ಅಂಗವಾಗಿ ಭಾನುವಾರದಂದು ಐ.ಸಿ.ಆರ್ ಕೃಷಿ ವಿಜ್ಞಾನ ಕೇಂದ್ರ ಹಗರಿ ಮತ್ತು ಕೃಷಿ ಇಲಾಖೆ ವತಿಯಿಂದ ಸಂಡೂರು ತಾಲ್ಲೂಕಿನ ಗುಡೆಕೋಟೆ, ಚಂದ್ರಶೇಖರಪುರ, ರಾಮದುರ್ಗ, ಮುಟ್ಟಾಳಕುಂಟ, ತ್ಯಾಗದಲ್ ಹಾಗೂ ಎಸ್.ಓಬಳಾಪುರ ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕುರಿತು ಗ್ರಾಮಗಳ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಕೃಷಿ ವಿಜ್ಞಾನ ಕೇಂದ್ರ ಹಗರಿಯ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಪಾಲಯ್ಯ.ಪಿ ಅವರು ಮಾತನಾಡಿ, ವಿಕಸಿತ ಕೃಷಿ ಸಂಕಲ್ಪ ಅಭಿಯಾನದಲ್ಲಿ ಅಧಿಕಾರಿಗಳ ತಂಡಗಳು ಹಳ್ಳಿಗಳಿಗೆ ಭೇಟಿ ನೀಡಿ, ಹವಾಮಾನ ಸ್ನೇಹಿ ಬೆಳೆ ಪ್ರಭೇದಗಳು, ರಸಗೊಬ್ಬರಗಳ ಸಮತೋಲಿತ ಬಳಕೆ, ಮಣ್ಣಿನ ಪೋಷಕಾಂಶಗಳ ಜ್ಞಾನ ಮತ್ತು ಸಂರಕ್ಷಣೆ, ಬೆಳೆ ರೋಗಗಳು ಮತ್ತು ಅವುಗಳ ಚಿಕಿತ್ಸೆ ಮತ್ತು ಕೃಷಿ ವೈವಿಧ್ಯೀಕರಣವನ್ನು ಉತ್ತೇಜಿಸುವ ತಂತ್ರಗಳ ಬಗ್ಗೆ ರೈತರಿಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತಾರೆ ಎಂದು ಅವರು ಹೇಳಿದರು.

ಪ್ರಸ್ತುತ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ಸಾವಯವ ಕೃಷಿ, ಕೃಷಿಯಲ್ಲಿ ಡ್ರೋನ್‌ಗಳ ಬಳಕೆ, ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆ ರೈತರಿಗೆ ಶಿಕ್ಷಣ ನೀಡುವಲ್ಲಿ ಈ ಅಭಿಯಾನವು ವಿಶೇಷವಾಗಿ ಉಪಯುಕ್ತವಾಗಿದೆ ಎಂದು ತಿಳಿಸಿದರು.

ಮುಂಗಾರು ಬೆಳೆಗಳಿಗೆ ಅನುಸರಿಸಬೇಕಾದ ಕ್ರಮಗಳು, ಸೂಕ್ತ ತಳಿ ಬಿತ್ತನೆ ಬೀಜದ ಆಯ್ಕೆ, ಬೀಜೋಪಚಾರ, ಕೃಷಿಯಲ್ಲಿನ ವಿನೂತನ ತಾಂತ್ರಿಕತೆಗಳು ಮುಂತಾದವುಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

ಹಿರಿಯ ವಿಜ್ಞಾನಿ (ಮಣ್ಣು ವಿಜ್ಞಾನ) ಡಾ.ರವಿ.ಎಸ್ ಅವರು ಮಾತನಾಡಿ, ರೈತರಿಗೆ ಮಣ್ಣು, ನೀರಿನ ಪರೀಕ್ಷೆ ಮಾಡಿಸುವುದರಿಂದ ತಮ್ಮ ಜಮೀನಿನಲ್ಲಿನ ಪೋಷಕಾಂಶಗಳು ಎಷ್ಟು ಪ್ರಮಾಣದಲ್ಲಿ ಇದೆ ಮತ್ತು ಅದು ಬೆಳೆಗಳಿಗೆ ಯಾವ ಪ್ರಮಾಣದಲ್ಲಿ ದೊರೆಯುತ್ತದೆ ಹಾಗೂ ಮಣ್ಣಿನ ಫಲವತ್ತತೆಯನ್ನು ಯಾವ ರೀತಿಯಾಗಿ ಸಮತೋಲನವಾಗಿ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹೆಸರಘಟ್ಟದ ಬೆಂಗಳೂರಿನ ವಿಜ್ಞಾನಿಗಳಾದ ಹತಿಕ್ ಉಲ್ಲಾ ಅವರು ತೋಟಗಾರಿಕೆ ಬೆಳೆಗಳ ಸಮಗ್ರ ರೋಗ ಹಾಗೂ ಕೀಟ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಡಾ.ನರೇಶ್ ಅವರು ತರಕಾರಿ ಬೆಳೆಗಳ ಉತ್ಪಾದನೆ, ನಿರ್ವಹಣೆ ಮತ್ತು ಸಂಸ್ಕರಣೆ ಹಾಗು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಿAದ ಬಿಡುಗಡೆಯಾದ ಹೊಸ ತಳಿಗಳ ಬಗ್ಗೆ ರೈತರಿಗೆ ತಿಳಿಸಿದರು.

ಡಾ.ಪ್ರಭುಲಿಂಗ ಅವರು ರೈತರಿಗೆ ಕೀಟ ನಿರ್ವಹಣೆಗಾಗಿ ಜೈವಿಕ ಕೀಟನಾಶಕಗಳು ಹಾಗು ಸಸ್ಯ ಜನ್ಯ ಪಿಡೇ ನಾಶಕಗಳ ಮಾಹಿತಿ ತಿಳಿಸಿದರು. ಬೇಸಾಯ ವಿಜ್ಞಾನಿಗಳಾದ ಡಾ.ಮಲ್ಲೇಶ್ ಅವರು ತೋಗರಿ ತಳಿಗಳು, ನೀರು ಹಾಗು ಮಣ್ಣಿನ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು.

ಅಭಿಯಾನದಲ್ಲಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ರಾಜೇಶ್ವರಿ, ಡಾ.ಮಲ್ಲೇಶ್, ಡಾ.ಕಂದನ್ ಮತ್ತು ಡಾ.ನವೀನ್ ಕುಮಾರ್.ಪಿ ಮತ್ತು ವಿವಿಧ ಗ್ರಾಮಗಳಿಂದ ಹೆಚ್ಚಿನ ರೈತರಗಳು ಭಾಗವಹಿಸಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು