Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಧ್ಯಮ ಅಕಾಡೆಮಿಯಿಂದ ಫೆಲೋಷಿಪ್: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ





ಬಳ್ಳಾರಿ,ಆ.03

ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪತ್ರಕರ್ತರಿಗೆ ಆರು ವಿಷಯಗಳ ಕುರಿತ ಫೆಲೋಷಿಪ್ ಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು 2025ರ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.

ಅಕಾಡೆಮಿಯ ಸಾಮಾನ್ಯ ಆಯವ್ಯಯದಡಿ ಎರಡು, ಮಹಿಳಾ ಆಯವ್ಯಯದಡಿ ಎರಡು ಹಾಗೂ ಪರಿಶಿಷ್ಟ ಜಾತಿ ಉಪಯೋಜನೆಯಡಿ ಒಂದು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಒಂದು ಫೆಲೋಷಿಪ್ ನೀಡಲಾಗುವುದು. ಫೆಲೋಷಿಪ್ ಅವಧಿ 6 ತಿಂಗಳು.

ಕನಿಷ್ಟ ಐದು ವರ್ಷ ಸೇವಾನುಭವ ಹೊಂದಿರುವ, ಕನಿಷ್ಟ 30 ವರ್ಷದಿಂದ 50 ವರ್ಷ ವಯೋಮಿತಿಯ ಪತ್ರಕರ್ತರು ಫೆಲೋಷಿಪ್ ಗೆ ಅರ್ಜಿ ಸಲ್ಲಿಸಬಹುದು. ಪತ್ರಕರ್ತರು ಪದವೀಧರರಾಗಿರಬೇಕು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಈ ಕುರಿತು ಸಂಪಾದಕರ ದೃಢೀಕರಣ ಪತ್ರ ಸಲ್ಲಿಸಬೇಕು.

ಫೆಲೋಷಿಪ್ ನ ವಿಷಯಗಳು:

ಬಾಲ್ಯವಿವಾಹ, ಪೋಕ್ಸೋ, ಮರ್ಯಾದೆಗೇಡು ಹತ್ಯೆ- ಮಾಧ್ಯಮ ದೃಷ್ಟಿಕೋನ. ಕೃಷಿ ಸಂವಹನ- ಒಂದು ಅಧ್ಯಯನ. ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ. ಬುಡಕಟ್ಟು ಕಾಯ್ದೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ- ಮಾಧ್ಯಮ ನೋಟ.

Role of Media in creating awareness on cybercrime and digital safety (ಇಂಗ್ಲಿಷ್ ನಲ್ಲಿ ಅಧ್ಯಯನ ವರದಿ ಸಲ್ಲಿಸುವುದು). ಮಾಧ್ಯಮ ಶಿಕ್ಷಣ ಮತ್ತು ವೃತ್ತಿ ನಡುವಿನ ಅಂತರ: ಕಾರಣಗಳು, ಪರಿಣಾಮ ಹಾಗೂ ಪರಿಹಾರ.

ಫೆಲೋಷಿಪ್ ಅವಧಿ ಆರು ತಿಂಗಳು. ಅರ್ಜಿ ಸ್ವೀಕರಿಸಲು 8ನೇ ಆಗಸ್ಟ್ 2025 ಕೊನೆಯ ದಿನವಾಗಿದ್ದು, ವಿಜೇತರ ಆಯ್ಕೆಯಲ್ಲಿ ಅಕಾಡೆಮಿಯ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್ ಸೈಟ್ mediaacademy.karnataka.gov.in ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಪೂರಕ ದಾಖಲೆಗಳು ಹಾಗೂ ಅಧ್ಯಯನ ಕುರಿತ ಟಿಪ್ಪಣಿಯೊಂದಿಗೆ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು 560001 ಇವರಿಗೆ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು