Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ


ಬಳ್ಳಾರಿ,ಜು.09



ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಾನೂನು ಪದವೀಧರರ ತರಬೇತಿಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜು.25 ರ ವರರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.

*ನಿಬಂಧನೆಗಳು:*

ಅಭ್ಯರ್ಥಿಯು ಬಳ್ಳಾರಿ ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು ಪ್ರವರ್ಗ-1, ಪ್ರವರ್ಗ-2(ಎ), ಪ್ರವರ್ಗ-3(ಎ) ಮತ್ತು ಪ್ರವರ್ಗ-3(ಬಿ)ಗೆ ಸೇರಿದವರಾಗಿರಬೇಕು. ಶೇಕಡವಾರು ಪ್ರವರ್ಗ-1 ರಲ್ಲಿ 2 ಅಭ್ಯರ್ಥಿಗಳನ್ನು ಅಯ್ಕೆ ಮಾಡಿ ಉಳಿದ ವರ್ಗಗಳಲ್ಲಿ ನಿಯಮಾನುಸಾರ 8 ಅಭ್ಯರ್ಥಿಗಳು ಒಟ್ಟು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ಬಾರ್ ಕೌನ್ಸಿಲ್ನಲ್ಲಿ ಹೆಸರನ್ನು ನೋಂದಾಯಿಸಿರಬೇಕು.

ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ ರೂ.4,000 ಗಳ ತರಬೇತಿ ಭತ್ಯೆ ನೀಡಲಾಗುವುದು. 5 ಅಭ್ಯರ್ಥಿಗಳನ್ನು ಪ್ರವರ್ಗ-2(ಎ) ರಲ್ಲಿ ಅಯ್ಕೆ ಮಾಡಲಾಗುವುದು. ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ (ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಕ್ಕೆ) ಇರುತ್ತದೆ. ತರಬೇತಿಯ ಅವಧಿಯ ಮಧ್ಯಭಾಗದಲ್ಲಿ ಅಭ್ಯರ್ಥಿಯು ತರಬೇತಿಗೆ ಗೈರು ಹಾಜರಾದಲ್ಲಿ ಪಡೆಯಲಾಗಿರುವ ತರಬೇತಿ ಭತ್ಯೆಯ ಹಣವನ್ನು ಬಡ್ಡಿಯೊಂದಿಗೆ ಪಾವತಿಸಬೇಕಾಗುವುದು. ವಾರ್ಷಿಕ ಆದಾಯದ ಮಿತಿ ಪ್ರವರ್ಗ-2ಎ ಗೆ ರೂ.2.50 ಲಕ್ಷ ನಿಗದಿಪಡಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಸಮಿತಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ ಕನಿಷ್ಟ 15 ವರ್ಷಗಳ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು. ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಮತ್ತು ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸಬೇಕು. ಅಪೂರ್ಣವಾದ ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಯನ್ನು ಯಾವುದೇ ಮುನ್ಸೂಚನೆ ಇಲ್ಲದೇ ತಿರಸ್ಕರಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ www.ballari.nic.in ವೆಬ್ಸೈಟ್ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-275751 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ