Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿಯ ಅವಧಿ ವಿಸ್ತರಣೆ

ಬಳ್ಳಾರಿ,ಆ.06

ಜಿಲ್ಲೆಯಲ್ಲಿ ಪ್ರಸ್ತಕ ಸಾಲಿನ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (ಆರ್‌ಡಬ್ಲೂö್ಯಬಿಸಿಐಎಸ್) ಯ ನೋಂದಣಿ ಪ್ರಕ್ರಿಯೆಯನ್ನು ಆ.16 ರ ವರೆಗೆ ವಿಸ್ತರಿಸಲಾಗಿದ್ದು, ಅರ್ಹ ರೈತರು ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ ಸಪ್ಪಂಡಿ ಅವರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ, ಗುಡುಗು ಮಿಂಚುಗಳಿ0ದ ಬೆಳೆಗಳಿಗೆ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ನಷ್ಟದ ಪರಿಹಾರ ನೀಡಲಾಗುವುದು.

ವಿಮಾ ಕಂಪನಿ: ಕೆಎಸ್‌ಹೆಚ್‌ಎಂಎ ವಿಮಾ ಕಂಪನಿಯಾಗಿದ್ದು, ದಾಳಿಂಬೆ ಬೆಳೆ ವಿಮಾ ಯೋಜನೆಯಡಿ ಒಳಪಡುವ ಬೆಳೆಯಾಗಿದೆ.

ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6,350 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಕಂಪ್ಲಿ ಮತ್ತು ಕುರುಗೋಡು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ.9481305830, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ:08395-260389 ಹಾಗೂ ಮೊ.9740934208, ಕಂಪ್ಲಿ ಮತ್ತು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396-222066 ಹಾಗೂ ಮೊ.9916794371 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು