Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೇವಾ ನಿವೃತ್ತಿ ಹೊಂದಿದ ಶ್ಯಾಮ್ ಡಿ ತಳೇಕರ್ಗೆ ಬೀಳ್ಕೊಡುಗೆ




ಕಾರವಾರ.ಜು31 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 24 ವರ್ಷಗಳ ವಾಹನ ಚೊಕ್ಕಟಗಾರರಾಗಿ ಸುದೀರ್ಘ ಸೇವೆ ಸಲ್ಲಿಸಿ,ಸೇವಾ ನಿವೃತ್ತಿ ಹೊಂದಿದ ಶ್ಯಾಮ್ ಡಿ ತಳೇಕರ್ ಅವರಿಗೆ ಇಲಾಖೆಯಿಂದ ಆತ್ಮಿಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಬುಧವಾರ ವಾರ್ತಾ ಭವನದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಇಲಾಖೆಯ ಸಿಬ್ಬಂದಿಗಳು, ಪತ್ರಕರ್ತರು ಅವರನ್ನು ಆತ್ಮಿಯವಾಗಿ ಸನ್ಮಾನಿಸಿದರು.



ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಶಿವಕುಮಾರ್ ಮಾತನಾಡಿ ಇಲಾಖೆಯಲ್ಲಿ 24 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿರುವ, ಶ್ಯಾಮ್ ಅವರು ಇಲಾಖೆಗೆ ಸಲ್ಲಸಿರುವ ಸೇವೆಯನ್ನು ಸ್ಮರಿಸಿ, ನಿವೃತ್ತಿ ನಂತರವೂ ಇಲಾಖೆಯ ಜೊತೆ ಉತ್ತಮ ಒಡನಾಟವನ್ನು ಇಟ್ಟುಕೊಳ್ಳಲಿ ಎಂದರು.



ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಸಮಿತಿ ಅಧ್ಯಕ್ಷ ಟಿ.ಬಿ ಹರಿಕಾಂತ್ ಮಾತನಾಡಿ ನಿರಂತರವಾಗಿ ಎಲ್ಲರೊಂದಿಗೆ ಉತ್ತಮ ಭಾಂದವ್ಯ ಹೊಂದುವ ಮೂಲಕ ಪತ್ರಕರ್ತರೊಂದಿಗೆ ಆತ್ಮಿಯವಾಗಿದ್ದು ಇಂದು ಸೇವಾ ನಿವೃತ್ತಿಯಾಗುತ್ತಿರುವ ಅವರ ನಿವೃತ್ತಿ ಜೀವನ ಒಳ್ಳೆಯದಾಗಿರಲಿ ಎಂದರು.



ಜಿಲ್ಲಾ ಪತ್ರಿಕಾ ಭವನ ಸಮಿತಿ ಉಪಾಧ್ಯಕ್ಷ ನಾಗರಾಜ ಹರಪನಹಳ್ಳಿ ಮಾತನಾಡಿ ಶ್ಯಾಮ್ ಸುಧೀರ್ಘ ಅವಧಿಯವರೆಗೆ ವಾರ್ತಾ ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದಾರೆ. ಪತ್ರಕರ್ತರ ಜೊತೆಗಿನ ಒಡನಾಟ ಉತ್ತಮವಾಗಿತ್ತು. ಎಲ್ಲರೊಂದಿಗೆ ಪ್ರೀತಿಯಿಂದ ಕಾಣುತ್ತಿದ್ದು ಇಲಾಖೆಯಲ್ಲಿ ಕಪ್ಪು ಚುಕ್ಕೆ ಇಲ್ಲದ ರೀತಿ ಕೆಲಸ ಮಾಡಿ ನಿವೃತ್ತಿಯಾಗಿದ್ದಾರೆ. ಪತ್ರಕರ್ತರ ಜೊತೆ ಅವರ ಒಡನಾಟ ಹೀಗೆ ಇರಲಿ ಎಂದರು.



ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರ.ದ.ಸ ರಾಜು ಭೋವಿ, ವಾಹನ ಚಾಲಕ ಗೋವಿಂದ ನಾಯ್ಕ, ಸಿಬ್ಬಂದಿಗಳಾದ ಗಂಗಾಧರ ಚಲವಾದಿ, ಕಮಲಾ ನಾಯ್ಕ, ರಾಘವೇಂದ್ರ, ಮನೋಹರ, ಪತ್ರಕರ್ತರಾದ ಸಂದೀಪ್ ಸಾಗರ್, ಗಣೇಶ ಹೆಗಡೆ, ದೀಪಕ್ ಗೋಕರ್ಣ, ಭರತ್ ರಾಜ್, ರವಿ ಗೌಡ, ಮಂಜು ಪಟಗಾರ್, ಸುರೇಂದ್ರ, ಜಗದೀಶ್ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ