Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ವರಧಾನ ವಾಗಬೆಕಾಗಿರೋ ಮಳೆಯೆ ಶಾಪವಾಯಿತೇ...? ಸಿಡಿಲು ಮಳೆಗೆ ಕೃಷಿ ಭೂಮಿಯಲ್ಲಿ ಸಾವನ್ನಪ್ಪಿದ ರೈತರು .

ಬಳ್ಳಾರಿ, ವಿಜಯಪುರ ಹಾಗೂ ಹಾವೇರಿಯ ತಲಾ ಇಬ್ಬರು, ರಾಯಚೂರು, ಕೊಪ್ಪಳ, ಚಿಕ್ಕಮಗಳೂರಿನ ತಲಾ ಒಬ್ಬರು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ ಒಂದೇ ಕುಟುಂಬದ ಮೂವರು, ಹಾವೇರಿಯಲ್ಲಿ ಇಬ್ಬರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ಲೆಹಳ್ಳಿ ಹಾಗು ಗದಗದಲ್ಲಿ ಒಬ್ಬೊಬ್ಬರು ಸಿಡಿಲು ಬಡಿದು ಸಾವನಪ್ಪಿದ್ದಾರೆ.

ಬಳ್ಳಾರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಾರವಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಸಾವನಪ್ಪಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ಮೃತರನ್ನು ಬೀರಪ್ಪ (45) ಸುನಿಲ್ (26) ಮತ್ತು ವಿನೋದ್ (16) ಎಂದು ತಿಳಿದು ಬಂದಿದೆ. ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಳೆ ಬಂದಾಗ ಮೂವರು ಮರದ ಕೆಳಗೆ ನಿಂತಿದ್ದಾರೆ. ಈ ವೇಳೆ ಭಾರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

ವಿಜಯಪುರ ಜಿಲ್ಲೆಯ  ಇನ್ನು ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಡಿಲು ಬಡಿದು ಮಲ್ಲಪ್ಪ ತಾಳಿಕೋಟೆ (47) ಸಾವನಪ್ಪಿದ್ದಾ ರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮಲ್ಲಪ್ಪ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ  ಗೆದ್ಲೇಹಳ್ಳಿಯಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲಹಳ್ಳಿ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸಿಡಿಲು ಬಡಿದು ಕುರಿಗಾಹಿ ಲೊಕೇಶಪ್ಪ (65) ಸಾವನಪ್ಪಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

ಹಾವೇರಿ, ಗದಗದಲ್ಲೂ ಮೂವರು ಸಾವು ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಕೂಡ ಸಿಡಿಲು ಬಡಿದು ಮೂವರು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು , ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿಯ ನಾಗಪ್ಪ ಬಸವಣೆಪ್ಪ ಕಣಸೋಗಿ (65), ರಟ್ಟೀಹಳ್ಳಿ ತಾಲ್ಲೂಕಿನ ಕುಡುಪಲಿ ಸುನೀಲ್ ಕಾಳೇರ (29) ಹಾಗೂ ಗದಗ ಜಿಲ್ಲೆಯ ಬಸಾಪುರದ ಮರಿಯವ್ವ ನಾಯ್ಕರ್ (60)  ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ  ಪ್ರಕರಣಗಳು ದಾಖಲಾಗಿವೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ