Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಟಿ ಮಹಿಳೆಯರಿಗೆ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ; ಅರ್ಜಿ ಆಹ್ವಾನ


ಬಳ್ಳಾರಿ,ಏ.24

ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗಾಗಿ ಹೊಸಪೇಟೆಯಲ್ಲಿ 30 ದಿನಗಳ ‘ವಲಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ' (ಫ್ಯಾಷನ್ ಡಿಸೈನಿಂಗ್) ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ, ವಿಜಯನಗರದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ 30 ದಿನಗಳ ತರಬೇತಿಯಲ್ಲಿ ಫ್ಯಾಷನ್ ಡಿಸೈನಿಂಗ್ ಕುರಿತ ಪ್ರಾಯೋಗಿಕ ಮತ್ತು ಸಿದ್ಧಾಂತ ತರಗತಿಗಳ ಜೊತೆಗೆ ವಿವಿಧ ವಿಷಯಗಳ ಬಗ್ಗೆ ಪರಿಣಿತರಿಂದ ಮಾಹಿತಿ ನೀಡಲಾಗುವುದು.

ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮ ಪ್ರಾರಂಭಿಸುವ ಹಂತಗಳು ಮತ್ತು ಯೋಜನಾ ವರದಿ ತಯಾರಿಕೆ, ಸರ್ಕಾರದ ವಿವಿಧ ಸ್ವಯಂ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರಗಳು, ಸಾಲ ಸೌಲಭ್ಯ ಮತ್ತು ಹಣಕಾಸು ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ ಹಾಗೂ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಒಳಗೊಂಡAತೆ ಇತರೆ.

*ಅರ್ಹತೆಗಳು:*

ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಮಾತ್ರ ಅವಕಾಶ. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಏಪ್ರಿಲ್ 29, 2026 ರೊಳಗೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ-583102. ಅಥವಾ ಸಂಪರ್ಕ ಸಂಖ್ಯೆ: 9449226221, 7483538942, 9986332736 ಗೆ ಕರೆ ಮಾಡಬಹುದು ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕ ಜಿ.ಯು. ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ