Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಗೌಸಿಯಾ ಬೇಗಂ

ಬಳ್ಳಾರಿ,ಜೂ.24

ಜಿಲ್ಲಾಡಳಿತದಿಂದ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರರಾದ ಗೌಸಿಯಾ ಬೇಗಂ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂನ್ 27 ರಂದು ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ನಗರದ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಗುವುದು. ಆಹ್ವಾನ ಪತ್ರಿಕೆಗಳನ್ನು ಶಿಷ್ಠಾಚಾರದಂತೆ ಮುದ್ರಿಸಿ ಆಹ್ವಾನ ನೀಡಬೇಕು ಎಂದರು.

ಕೆಂಪೇಗೌಡರ ಜಯಂತಿಯನ್ನು ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದು ಸರ್ಕಾರವು ಆದೇಶಿಸಿದ್ದು, ತಾಲ್ಲೂಕು ಮಟ್ಟದ ಶಾಲೆಗಳಲ್ಲಿ ಕೆಂಪೇಗೌಡರ ಕುರಿತಾಗಿ ಪ್ರಬಂಧ, ಭಾಷಣ, ವಿಚಾರಗೋಷ್ಠಿ ಮತ್ತು ಜಾಥಾ ಕಾರ್ಯಕ್ರಮ ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿದ್ದು, ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಡಿಡಿಪಿಐ ಅವರಿಗೆ ನಿರ್ದೇಶನ ನೀಡಿದರು.

ಮಹನೀಯರ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ತಿಳಿಯಪಡಿಸಲು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು. ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ