Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಪ್ರದಾಯಿಕ ಬೆಳೆಗಳ ಜತೆಗೆ ತೋಟಗಾರಿಕೆ ಬೆಳೆ ಬೆಳೆಯಿರಿ



ಚಿತ್ರದುರ್ಗಜುಲೈ18:

ರೈತರು ತಮ್ಮ ಸಾಂಪ್ರದಾಯಿಕ ಬೆಳೆಗಳ ಜೊತೆಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಬೇಕು ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ರಾಮನಗರ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗದ ಅಧ್ಯಾಪಕರು ಹಾಗೂ ಶಿಬಿರದ ಸಂಯೋಜಕಿ ಡಾ.ಜಿ.ಎಂ.ರಶ್ಮಿ ಸಲಹೆ ನೀಡಿದರು.

ಚಳ್ಳಕೆರೆ ತಾಲ್ಲೂಕಿನ ನೆಲಗೇತನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದುರ್ಗ ಗ್ರಾಮದಲ್ಲಿ ಗುರುವಾರ ಬೆಂಗಳೂರು ವಿಶ್ವವಿದ್ಯಾಲಯದ ರಾಮನಗರ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ವತಿಯಿಂದ ಕಿಲಾರಿ ಪಶುಪಾಲಕ ಅನನ್ಯತೆ-ಸಮುದಾಯದಿಂದ ಸಮಾಜದೆಡೆಗೆ 10 ದಿನಗಳ ಸಮಾಜಕಾರ್ಯ ಶಿಬಿರದ ಮೂರನೇ ದಿನದ ಕಾರ್ಯಕ್ರಮದಲ್ಲಿ ರೈತರು ದೇಶದ ಬೆನ್ನೆಲುಬು ಎಂಬ ವಿಷಯದ ಚಿಂತನ-ಮಂಥನದಲ್ಲಿ ಅವರು ಮಾತನಾಡಿದರು.

ಸಮುದಾಯದ ಯುವಕರು ಇದನ್ನು ನಿರ್ವಹಿಸುವಲ್ಲಿ ಪ್ರಮುಖ ವಹಿಸಬೇಕು. ಸಮುದಾಯದ ಮಹಿಳೆಯರು, ರೈತಾಪಿ ಜನರು ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಕರೆ ಕೊಟ್ಟರು.

ತೋಟಗಾರಿಕೆ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜ್ ಅವರು, ತೋಟಗಾರಿಕೆ ಇಲಾಖೆಯ ಯೋಜನೆ ಮತ್ತು ಸೌಲಭ್ಯಗಳ ಬಗ್ಗೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯವಿಭಾಗದ ಅಧ್ಯಾಪಕ ಡಾ.ಗಂಗಾಧರ್ ರೆಡ್ಡಿ ಅವರು ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವಲ್ಲಿ ಸಮುದಾಯದ ಪಾತ್ರ ಎಂಬ ವಿಷಯಗಳ ಕುರಿತು ಮಾತನಾಡಿದರು.

ಶಿಬಿರದ ಸಂಯೋಜಕ ಡಾ.ದೇವಿಂದ್ರಪ್ಪ ಮಾತನಾಡಿ, ರಾಮದುರ್ಗ ಗ್ರಾಮದ ಸಾಮಾಜಿಕ ನಕ್ಷೆಯನ್ನು ನಮ್ಮ ಶಿಬಿರಾರ್ಥಿಗಳು ಗ್ರಾಮ ಪರಿವೀಕ್ಷಣೆ ಮಾಡಿ ವೇದಿಕೆಯ ಪಕ್ಕದಲ್ಲಿ ಬಿಡಿಸಿದ್ದಾರೆ. ಅದರಲ್ಲಿ ಗ್ರಾಮದ ಕಚ್ಚಾ ಮನೆಗಳು, ಪಕ್ಕ ಮನೆಗಳು, ಗುಡಿಸಲುಗಳು ಹೀಗೆ ಹಲವು ಮಾಹಿತಿಯನ್ನು ವಿವರವಾಗಿ ಬಿಡಿಸಿದ್ದಾರೆ ಎಂದು ತಿಳಿಸಿದ ಅವರು, ಶಿಬಿರಾರ್ಥಿಗಳೊಂದಿಗೆ ಗ್ರಾಮದ ಜನರು ಚರ್ಚೆ ಮಾಡಿ ಎಂದು ಗ್ರಾಮಸ್ಥರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಬಂಗಾರಪ್ಪ ಸೇರಿದಂತೆ ಗ್ರಾಮದ ಮುಖಂಡರು, ಶಿಬಿರಾರ್ಥಿಗಳು ಇದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ