Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯಕರ ಆಯುಷ್ ಪಾನಕ ಪರಿಚಯ: ಚಿಂಚಾ ಪಾನಕ ವಿತರಣೆ

ರಾಯಚೂರು,ಮೇ.22 ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಮೇ.22 ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆರೋಗ್ಯಕರ ಆಯುಷ್ ಪಾನಕ ಪರಿಚಯದಲ್ಲಿ “ಚಿಂಚಾ ಪಾನಕ” ಸಾರ್ವಜನಿಕರಿಗು ಮತ್ತು ಸಿಬ್ಬಂದಿಗಳಿಗೆ ವಿತರಿಸುವ ಮೂಲಕ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಸುಭಾಷ ಸಂಪಗಾವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.



ಇದೇ ವೇಳೆ ಚಿಂಚಾ ಪಾನಕ ತಯಾರಿಸುವ ವಿಧಾನದ ಬಗ್ಗೆ ಪಂಚ ಕರ್ಮ ಘಟಕದ ವೈದ್ಯರಾದ ಡಾ.ನವೀನ ಎನ್.ಡಿ, ಅವರು ಮಾತನಾಡಿ, ಹುಣಸಿ ಹಣ್ಣು 100 ಗ್ರಾಂ, ಬೆಲ್ಲದ ಪುಡಿ 4೦೦ ಮಿಲಿ, ಜೀರಿಗೆ ಪುಡಿ 1ಗ್ರಾಂ, ಕಾಳು ಮೆಣಸಿನ ಪುಡಿ 5 ಗ್ರಾಂ, ಸೈಂದವ ಲವಣ 5 ಗ್ರಾಂ ತೆಗೆದುಕೊಂಡು ಹುಣಸಿ ಹಣ್ಣು ಅಗತ್ಯ ಪ್ರಮಾಣ ನೀರಿನಲ್ಲಿ ಇಡೀ ರಾತ್ರಿ ನೆನಸಿಡಬೇಕು, ಮರುದಿನ ಬೆಳಿಗ್ಗೆ ಅದನ್ನು ಶುದ್ಧವಾದ ಕೈಗಳಿಂದ ಚೆನ್ನಾಗಿ ಹಿಸಕಿ ಸೋಸಿಕೋಬೇಕು ಅದನ್ನು ಒಂದು ಬಾಟಲಿನಲ್ಲಿ ತುಂಬಿಸಕೊಳ್ಳಬೇಕು, 2 ರಿಂದ ೦3 ಲಿಟರ್ ನೀರಿಗೆ ಮೇಲೆ ತಿಳಿಸಿದ ಎಲ್ಲಾ ಮಿಶ್ರಣಗಳನ್ನು ಸೇರಿಸಿ ಕಲಿಸಬೇಕು. ಪ್ರತಿ ವ್ಯಕ್ತಿ 5ರಿಂದ 1೦೦ ಮಿ.ಲಿ ಪಾನಕವನ್ನು ಸೇವಿಸಬೇಕು ಎಂದು ಮಾಹಿತಿ ನೀಡಿದರು.



ನಂತರ ಡಾ.ಬಸವರಾಜ್ ಕಟ್ಟಿ ಅವರು ಚಿಂಚಾ ಪಾನಕವು ಮಾನವನ ಜೀರ್ಣ ಕ್ರಿಯೇಗೆ, ಮಲಬದ್ಧತೆಗೆ ಅತ್ಯುತಮ ಪಾನಕವಾಗಿದೆ. ಇದು ದೇಹದ ಉಷ್ಣವನ್ನು ಕಡಿಮೆ ಮಾಡುವುದರದೊಂದಿಗೆ ಬಾಯರಿಕೆ ನೀಗಿಸುವುದು. ಇದು ಮನೆಯಲ್ಲಿ ಸಿಗುವಂತಹ ಸಾಮಗ್ರಿಗಳಿಂದ ಅತ್ಯುತಮ ಆರೋಗ್ಯಕರ ಪಾನಕವನ್ನು ತಯಾರಿಸಿಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ.ಮೊಹಮ್ಮದ ಅಮೀನುದ್ದಿನ್ ಅಸ್ಲಂ, ಡಾ.ರಾಜೇಂದ್ರ ಬೆನಕಿನಾಳ್, ಡಾ.ಪೂಜಾ, ಸಹಾಯಕ ಆಡಳಿತ ಅಧಿಕಾರಿ ಅಸ್ಮಾಬೇಗಂ,ಕಚೇರಿ ಅಧೀಕ್ಷಕ ನರಸಪ್ಪ, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಹಾಗೂ ಆಯುಷ್ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು