Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರೀ ಮುನ್ನಡೆ

ಕರ್ನಾಟಕದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ಇಂದು (ನವೆಂಬರ್ 23) ಮತದಾನ ಆರಂಭವಾಗಿದೆ. ಇನ್ನು ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಶಿಗ್ಗಾಂವಿಯಲ್ಲಿ 5ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಯಿ 1,835 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪಠಾಣ್ ಅವರು ಹಿನ್ನಡೆಯಲ್ಲಿದ್ದಾರೆ.

ಶಿಗ್ಗಾಂವಿಯಲ್ಲಿ ನಾಲ್ಕನೇ ಸುತ್ತಿನಲ್ಲೂ ಕೂಡ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದರು. ಕಾಂಗ್ರೆಸ್​ ಅಭ್ಯರ್ಥಿ ಯಾಸಿರ್ ಅಹಮದ್​ ಖಾನ್​ ಪಠಾಣ್​ಗಿಂತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 1,219 ಮತಗಳಿಂದ ಮುನ್ನಡೆ ಸಾಧಿಸಿದ್ದರು.

ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಸಂಡೂರಿನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್​​​ ಅಭ್ಯರ್ಥಿ ಅನ್ನಪೂರ್ಣ 1,001 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. 20,128 ಮತಗಳು ಬಂದಿವೆ. ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 19,127 ಮತಗಳು ಬಂದಿವೆ.

ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿನ ಫೈಟ್ ನಡೆಯುತ್ತಿದೆ. ಸಿ.ಪಿ. ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಹಾವು ಏಣಿ ಆಟ ನಡೆಯುತ್ತಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದ್ದೆ. ಮೊದಲ ಒಂದು ಸುತ್ತಿನಲ್ಲಿ ನಿಖಿಲ್ ಮುಂದಿದ್ದರೆ, ಇನ್ನೊಂದು ಸುತ್ತಿನಲ್ಲಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದರು. ಚುನಾವಣೆಯಲ್ಲಿ ಇದು ಸಿ.ಪಿ. ಯೋಗೇಶ್ವರ್​ ಮತ್ತು ನಿಖಿಲ್ ಕುಮಾರಸ್ವಾಮಿ ನಡುವಿನ ಫೈಟ್ ಆದರೆ, ಇದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡುವಿನ ಪೈಪೋಟಿ ಎಂದು ಹೇಳಲಾಗುತ್ತಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ