Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಕಿದ ಅಥವಾ ಬೀದಿ ನಾಯಿ ಕಚ್ಚದರೆ, ಉಗುರಿನಿಂದ ಪರಚಿದರೆ ನಿರ್ಲಕ್ಷ್ಯ ವಹಿಸದೇ ರೇಬೀಸ್ ನಿರೋಧಕ ಚುಚ್ಚುಮದ್ದು ಪಡೆಯಿರಿ: ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ

ಬಳ್ಳಾರಿ,ಅ.25

ಸಾಮಾನ್ಯವಾಗಿ ಸಾಕಿದ ನಾಯಿಗಳು ಕಚ್ಚಿದರೆ, ಉಗುರಿನಿಂದ ಪರಚಿದರೆ ಅಥವಾ ನಮ್ಮ ಮೈ ಮೇಲಿರುವ ಈಗಾಗಲೆ ಇರುವ ಗಾಯವನ್ಮು ನಾಲಿಗೆಯಿಂದ ನೆಕ್ಕಿದರೆ ಏನೂ ಆಗುವುದಿಲ್ಲವೆಂದು ನಿರ್ಲಕ್ಷ್ವ. ವಹಿಸದೇ ಸೋಪು ಮತ್ತು ನೀರಿನಿಂದ ತೊಳೆದು ಹತ್ತಿರದ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ರೇಬಿಸ್ ನಿರೋಧಕ ಚುಚ್ಚುಮದ್ದು ಪಡೆಯಬೇಕು ಎಂದು ಜಿಲ್ಲಾ ಸರ್ವೇಕ್ಷಣಧಿಕಾರಿ ಹಾಗೂ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ ನೋಡಲ್ ಅಧಿಕಾರಿ ಡಾ.ಮರಿಯಂಬಿ.ವಿ.ಕೆ ಹೇಳಿದರು.
ನಗರದ ಮುಂಡ್ರಿಗಿ ಬಡಾವಣೆಯಲ್ಲಿ ನಾಯಿ ಕಡಿತ ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ನೀಡುತ್ತಾ ಮಾತನಾಡಿ, ಸೋಂಕುವುಳ್ಳ ನಾಯಿ ಕಡಿತದಿಂದ ಮಾರಣಾಂತಿಕ ರೇಬೀಸ್ ಕಾಯಿಲೆಯನ್ನು ಹರಡುವುದನ್ನು ತಡೆಗಟ್ಟಬಹುದಾಗಿದ್ದು, ವೈದ್ಯರ ಸಲಹೆಯಂತೆ ರೇಬಿಸ್ ಚುಚ್ಚುಮದ್ದನ್ನು ಮೊದಲ ದಿನ, 3ನೇ ದಿನ, 7ನೇ ದಿನ, 14ನೇ ದಿನ, 28 ದಿನ ತಪ್ಪದೇ ಲಸಿಕೆ ಪಡೆಯಬೇಕು ಎಂದು ವಿನಂತಿಸಿದರು.
ಈ ವೇಳೆ ಗುಗ್ಗರಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶೇಗುಫ್ತಾ ಷಾಹೀನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಎಪಡಮಲಾಜಿಸ್ಟ್ ಡಾ.ನಿವೇದಿತಾ, ಮೈಕ್ರೋಬಯಾಲಜಿಸ್ಟ್ ಶರತ್‌ಕುಮಾರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಉಪ್ಪಾರ ಸೇರಿದಂತೆ ಪ್ರಯೋಗಾಲಯ ತಂತ್ರಜ್ಞರು, ಸಿಬ್ಬಂದಿಯವರು ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ಉಪಸ್ಥಿತರಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು