Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ: ಜಿಲ್ಲಾ ಸಂಚಾಲಕ ಗಾದಿಲಿಂಗ,ಸಿದ್ದೇಶ ಊಳೂರು

ಬಳ್ಳಾರಿ,ಅ,03:ವಸತಿ ಮತ್ತು ಶಿಕ್ಷಣ ಶಾಲೆಗಳಲ್ಲಿ ಮೇರಿಟ್ ಆಧಾರದ ಮೇಲೆ ಪ್ರವೇಶಾತಿ ಕಲ್ಪಿಸಿಕೊಟ್ಟಿರುವುದಿಲ್ಲ ಸಮಗ್ರ ತನಿಖೆ ಮಾಡಿ ಸೂಕ್ತ ಕ್ರಮ ಜರುಗಿಸ ಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಸಮಾಜ ಕಲ್ಯಾಣ ಸಚಿವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ಒತ್ತಾಯಿಸುತ್ತದೆ.



ವಸತಿ ಮತ್ತು ಶಿಕ್ಷಣ ಶಾಲೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆ,ಬಳ್ಳಾರಿ ಉಪನಿರ್ದೇಶಕರು,ಜಿಲ್ಲೆಯಲ್ಲಿ ವಸತಿ ಮತ್ತು ಶಿಕ್ಷಣ ಶಾಲೆಗಳಲ್ಲಿ KEA (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೇರಿಟ್ ಆಧಾರದ ಮೇಲೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೀಟ್ ಹಂಚಿಕೆಯನ್ನು ಮಾಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಹಾಗೂ ತಮಗೆ ಬೇಕಾದವರಿಗೆ ಮೇರಿಟ್ ಇಲ್ಲದಿದ್ದರೂ ಸಹ ತಮ್ಮ ಲೇಟರ್ ಹೆಡ್‌ನಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ಕಲ್ಪಿಸಿಕೊಟ್ಟಿರುತ್ತಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ,ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾಧಿಕಾರಿಗಳು,ವಿಶೇಷ ತಂಡವನ್ನು ರಚನೆಮಾಡಿ ಕಾನೂನಾತ್ಮಕವಾಗಿ ತನಿಕೆಮಾಡಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯವನ್ನು ದೊರಕಿಸಿಕೊಡಬೇಕೆಂದು ಹಾಗೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಯಾರೇ ಇದ್ದರೂ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಭೀಮವಾದ ದಲಿತ ಸಂಘರ್ಷ ಸಮಿತಿ ಒತ್ತಾಯಿಸುತ್ತದೆ.

ಒಂದು ವಾರದ ಒಳಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯಾನಿರ್ವಾಹಕಾಧಿಕಾರಿಗಳ ತಂಡದೊಂದಿಗೆ ಬೇಟಿ ಮಾಡಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ತನಿಖೆಯನ್ನು ಮಾಡಿಸಿ ವರದಿಯನ್ನು ನೀಡಬೇಕೆಂದು ಈ ಮೂಲಕ ಕೋರುತ್ತೇವೆ. ಒಂದು ವೇಳೆ ತನಿಖೆಯಾಗದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮಾಡಲಾಗುವುದು ಎಂದು ಜಿಲ್ಲಾ ಸಂಚಾಲಕ ಗಾದಿಲಿಂಗ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಜೆ.ಎಸ್.ಶ್ರೀನಿವಾಸುಲು,ಮುಖಂಡರಾದ ಸಿದ್ದೇಶ, ಉಳೂರು,ಜಿಲ್ಲಾ ಸಂಘಟನಾ ಸಂಚಾಲಕರಾದ ಪ್ರಸಾದ್,ಕುಡತಿನಿ ಗಿರೀಶ್ ಸೇರಿದಂತೆ ಇನ್ನಿತರರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ