Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡೊನೇಷನ್ ಹಾವಳಿ ತಡೆಗಟ್ಟಲು ಮೌನೇಶ ಜಾಲವಾಡಗಿ ಒತ್ತಾಯ.

ಸಿಂಧನೂರು:  ನಾಡಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶ ಪ್ರಕಟವಾಗಿ ಮುಂದಿನ ಶಿಕ್ಷಣಕ್ಕೆ ಅಣಿಯಾಗುತ್ತಿದ್ದಂತೆ ವಿದ್ಯಾರ್ಥಿಗಳು ಮತ್ತು ಪಾಲಕರು ಡೊನೇಶನ್ ಹಾವಳಿ ಎದುರಿಸಬೇಕಾಗಿದೆ. ಇದರಿಂದ ಎಷ್ಟೋ ಜನ ವಿದ್ಯಾರ್ಥಿಗಳ ಶಿಕ್ಷಣದ ಕನಸು ಕಮರುತ್ತಿದೆ. ವಿದ್ಯಾರ್ಥಿಗಳಿಂದ ಕಡಿಮೆ ಶುಲ್ಕ ಪಡೆದು ಉತ್ತಮ ಶಿಕ್ಷಣ ನೀಡಬೇಕಾದ ವಿದ್ಯಾಸಂಸ್ಥೆಗಳು ಸರಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಹಣವಸೂಲಿ ಮಾಡುತ್ತಿವೆ. ಡೊನೇಷನ್ ಹೆಸರಿನಲ್ಲಿ ಹಗಲು ದರೋಡೆ ನಡೆಸುತ್ತಿದ್ದರೂ ಸರ್ಕಾರದ ಇಲಾಖೆಗಳು ಕ್ರಮ ಕೈಗೊಳ್ಳದೆ ಮೌನವಾಗಿದ್ದು ಖಂಡನೀಯ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ ಹೇಳಿದರು..


ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು,ಡೊನೇಷನ್ ಹಾವಳಿ ತಡೆಗಟ್ಟಲು ಸರಕಾರದ ಸುತ್ತೋಲೆಗಳು ಹೆಸರಿಗೆ ಮಾತ್ರ ಎನ್ನುವಂತಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಮನಬಂದಂತೆ ಶುಲ್ಕ ನಿಗದಿ ಮಾಡಿಕೊಳ್ಳುತ್ತಿವೆ.ಡೊನೇಷನ್ ಹಾವಳಿ ತಡೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಲೇಬೇಕು. ಖಾಸಗಿ ಕಾಲೇಜುಗಳು ರೋಸ್ಟರ್ ಪದ್ಧತಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಬೇಕು. ಸರಕಾರಿ ಕಾಲೇಜುಗಳ ಸಂಖ್ಯೆ ಹೆಚ್ಚಿಸಿ ಮೂಲಭೂತ ಸೌಲಭ್ಯ ನೀಡಬೇಕು. ಮೇಲೆ ಹೇಳಿದಂತೆ ಖಾಸಗಿ ಕಾಲೇಜುಗಳು ಮನ ಬಂದಂತೆ ಡೊನೇಷನ್ ವಸೂಲಿ ಮಾಡುತ್ತಿವೆ. ಇದನ್ನು ತಡೆಯಲು ಸರಕಾರ ಕೂಡಲೇ ಮುಂದಾಗಬೇಕು. 


ಶಿಕ್ಷಣ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸರಕಾರ ಹಲವು ಕಾಯಿದೆ ಜಾರಿಗೆ ತಂದಿದೆ. ಇದರ ಪ್ರಕಾರ ಅನುದಾನಿತ ಸಂಸ್ಥೆಗಳು, ಅನುದಾನರಹಿತ ಸಂಸ್ಥೆಗಳು ಅಭಿವೃದ್ಧಿ ಶುಲ್ಕವನ್ನು ಸರ್ಕಾರ ನಿಗದಿತ ಶುಲ್ಕ ಮಾತ್ರ ಸಂಗ್ರಹಿಸಲು ಅವಕಾಶವಿದೆ. ಹೆಚ್ಚು ಸಂಗ್ರಹಿಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಆದ್ರೂ ಸರ್ಕಾರದ ನಿಯಮ ಉಲ್ಲಂಘಿಸಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ವಿಧ್ಯಾರ್ಥಿ, ಪಾಲಕರಿಂದ ಮನಸ್ಸಿಗೆ ಬಂದಂತೆ ಶುಲ್ಕ ಸಂಗ್ರಹಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ಪ್ರತಿನಿಗಳು, ಪೋಷಕರು ಹಾಗೂ ಸಂಸ್ಥೆಗಳನ್ನೊಳಗೊಂಡ ಸಮಿತಿ ರಚಿಸಿ ಅಲ್ಲಿ ಇದರ ಬಗ್ಗೆ ಚರ್ಚಿಸಬೇಕು. ಈ ಪ್ರಕ್ರಿಯೆ ಎಲ್ಲಿಯೂ ಜಾರಿಗೆ ಬರುತ್ತಿಲ್ಲ. ಈ ಪ್ರಕ್ರಿಯೆ ಜಾರಿಯಾಗದ ಪರಿಣಾಮ ಮನ ಬಂದಂತೆ ವಂತಿಗೆ ವಸೂಲಿ ಮಾಡಲಾಗುತ್ತಿದೆ. 


ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಸಮಿತಿ ರಚಿಸಬೇಕು. ಕಾಲೇಜುಗಳ ಮಕ್ಕಳ ಸಂಖ್ಯೆ ಪ್ರಕಾರ ಸಂಸ್ಥೆಯ ಆದಾಯ ಕ್ರೂಢಿಕರಿಸಿ ಇಲಾಖೆಯೇ ಶುಲ್ಕ ನಿಗದಿ ಮಾಡಬೇಕು. ಸಂಘಟನೆಗಳ, ಪಾಲಕರ ಜಂಟಿ ಸಭೆ ಕರೆದು ವಿದ್ಯಾರ್ಥಿಗಳು ಎದುರಿಸುವ ಸಮಸ್ಯೆ ಚರ್ಚಿಸುವಂತಾಗಬೇಕು. ಡೊನೇಷನ್ ಹಾವಳಿ ತಡೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿಧ್ಯಾರ್ಥಿ ಹಾಗೂ ಪಾಲಕರಿಗೆ ಮಾಹಿತಿ ನೀಡಲು ಸರ್ಕಾರ ಹೊಸದಾಗಿ ಆದೇಶ ಹೊರಡಿಸಬೇಕು. ಡೊನೇಷನ್ ವಸೂಲಿ ತಡೆಯಲು ಕೊಡಲೇ ಸರ್ಕಾರ ವಿಧ್ಯಾರ್ಥಿ ಹಾಗೂ ಪಾಲಕರಿಗೆ ಡೊನೇಷನ್ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಉಚಿತ ಹೆಲ್ಪ್ ಲೈನ್ (ದೂರವಾಣಿ) ಆರಂಭಿಸಬೇಕು. ಕನಿಷ್ಠ ಪಕ್ಷ ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತುಂಬಾ ಸಹಾಯಕವಾಗಬಹುದು.


ಈಗಾಗಲೇ ತಮ್ಮಗೆ ತಿಳಿದಂತೆ ನಾಡಿನಲ್ಲಿ ಬಡ, ಮಧ್ಯಮ ವರ್ಗದ ಪಾಲಕರು ನಿರುದ್ಯೋಗ ಸಮಸ್ಯೆ ಮತ್ತು ಬೆಲೆ ಏರಿಕೆಯಿಂದ ಆರ್ಥಿಕವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ನಾಡಿನ ಮಕ್ಕಳು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪಾಸಾಗಿ ಮುಂದಿನ ಶಿಕ್ಷಣಕ್ಕೆ ಅಣಿಯಾಗುತ್ತಿದ್ದಂತೆ ವಿದ್ಯಾರ್ಥಿಗಳು ಮತ್ತು ಪಾಲಕರು ಡೊನೇಶನ್ ಹಾವಳಿ ಎದುರಿಸಬೇಕಾಗಿದೆ. ಇದರಿಂದ ಎಷ್ಟೋ ಜನ ವಿದ್ಯಾರ್ಥಿಗಳ ಶಿಕ್ಷಣದ ಕನಸು ಕಮರುತ್ತಿದೆ. ಡೊನೇಷನ್ ಹಾವಳಿ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು, ಹಾಗೂ ಈ ವಿಚಾರದಲ್ಲಿ ತಾವು ವಿಳಂಬ ನೀತಿ ಅನುಸರಿಸಿದರೆ  ಮುಂದಿನ ದಿನಗಳಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಅಲ್ಲದೇ ವಿದ್ಯಾರ್ಥಿ, ಪಾಲಕರೊಂದಿಗೆ ಜೊತೆಗೂಡಿ ಡೊನೇಷನ್ ವಸೂಲಿ ವಿರುದ್ಧ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸುತಿದ್ದೇವೆ ಎಂದು ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು