Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾಸಿಟಿವ್ ಹೋಮಿಯೊಪತಿ ಸೇವಾನ್ಯೂನ್ಯತೆ ; ಪರಿಹಾರ ನೀಡಲು ಸೂಚನೆ


ಶಿವಮೊಗ್ಗ,ಜು.03 ದೂರುದಾರರಾದ ಎಸ್ ಎಂ ಮಂಜಪ್ಪ, ವಿನೋಬನಗರ, ಶಿವಮೊಗ್ಗ ಇವರು ವ್ಯವಸ್ಥಾಪಕರು ಪಾಸಿಟಿವ್ ಹೋಮಿಯೋಪತಿ, ಪಿಜೆ ಎಕ್ಸ್ಟೆನ್ಶನ್ ದಾವಣೆಗೆರೆ ಇವರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ್ದ ದೂರಿನ ವಿರುದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ.

ದೂರುದಾರರು ಕ್ರಾನಿಕ್ ಪ್ಯಾಂಕ್ರಿಯಾಟೈಟಿಸ್ ಕಾಯಿಲೆಯ ರೋಗಿಯಾಗಿದ್ದು, ಎದರುದಾರರನ್ನು ಸಂಪರ್ಕಿಸಿದಾಗ ರೂ.40,000/- ಗಳನ್ನು ಪಾವತಿಸಿದರೆ, 3 ವರ್ಷಗಳ ಕಾಲ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡುವುದಾಗಿ ಭರವಸೆ ನೀಡಿರುತ್ತಾರೆ. ಅದರಂತೆ ದೂರುದಾರರು ದಿ: 29-03-2024 ಮತ್ತು ದಿ: 01-04-2024 ರಂದು ರೂ. 40 ಸಾವಿರಗಳನ್ನು ಪಾವತಿಸಿರುತ್ತಾರೆ.

ತದನಂತರ ಎದುರುದಾರರು ದೂರುದಾರರಿಗೆ ಯಾವುದೇ ರೀತಿಯ ಚಿಕಿತ್ಸೆ/ಔಷಧಿಗಳನ್ನು ಕೊಟ್ಟಿರುವುದಿಲ್ಲ. ಅನೇಕ ಬಾರಿ ಕೇಳಿಕೊಂಡರೂ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡದೇ ಇರುವ ಕಾರಣ ಸ್ಥಳೀಯ ರಾಜಕುಮಾರ್ ಡಯಾಗ್ನೊಸ್ಟಿಕ್, ಶಿವಮೊಗ್ಗ ಇವರ ಬಳಿ ಚಿಕಿತ್ಸೆ ಪಡೆದಿದ್ದಕ್ಕೆ ರೂ.50,000 ಖರ್ಚಾಗಿರುತ್ತದೆ. ಎದುರುದಾರರು ರೂ.40,000/- ಗಳನ್ನು ಪಡೆದು 3 ವರ್ಷಗಳವರೆಗೆ ಹೋಮಿಯೋಪತಿ ಚಿಕಿತ್ಸೆ/ಔಷಧಿಗಳನ್ನು ಕೊಡದೇ ಸೇವಾ ನ್ಯೂನ್ಯತೆ ಎಸಗಿರುತ್ತಾರೆ ಎಂದು ಆಯೋಗದ ಮುಂದೆ ದೂರನ್ನು ಸಲ್ಲಿಸಿರುತ್ತಾರೆ.

ದೂರುದಾರರು ಸಲ್ಲಿಸಿರುವ ಪ್ರಮಾಣಪತ್ರ, ದಾಖಲಾತಿಗಳನ್ನು ಪರಿಶೀಲಿಸಿ ದೂರುದಾರರ ವಾದವನ್ನು ಆಲಿಸಿ, ಎದುರುದಾರರು ಹಣವನ್ನು ಪಡೆದು ಚಿಕಿತ್ಸೆ/ಔಷಧಿಗಳನ್ನು ನೀಡದೇ ಸೇವಾನ್ಯೂನ್ಯತೆ ಎಸಗಿದ್ದಾರೆ ಎಂದು ಆಯೋಗ ತೀರ್ಮಾನಿಸಿ, ದೂರನ್ನು ಪುರಸ್ಕರಿಸಿ ಎದುರುದಾರರು ದೂರುದಾರರಿಂದ ಪಡೆದ ರೂ.40,000/- ಗಳಿಗೆ ಶೇ.9 ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡಲು ಹಾಗೂ ಕ್ರಮವಾಗಿ ಪರಿಹಾರವಾಗಿ, ಮಾನಸಿಕ ಹಿಂಸೆಗೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ರೂ.8000 ಮತ್ತು 5000 ಗಳನ್ನು ಈ ಆದೇಶವಾದ 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದಲ್ಲಿ, ಶೇ.12 ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು ಎಂದು ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನು ಒಳಗೊಂಡ ಪೀಠವು ದಿ: 30-06-2025 ರಂದು ಆದೇಶಿಸಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ