Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾಸಿಟಿವ್ ಹೋಮಿಯೊಪತಿ ಸೇವಾನ್ಯೂನ್ಯತೆ ; ಪರಿಹಾರ ನೀಡಲು ಸೂಚನೆ


ಶಿವಮೊಗ್ಗ,ಜು.03 ದೂರುದಾರರಾದ ಎಸ್ ಎಂ ಮಂಜಪ್ಪ, ವಿನೋಬನಗರ, ಶಿವಮೊಗ್ಗ ಇವರು ವ್ಯವಸ್ಥಾಪಕರು ಪಾಸಿಟಿವ್ ಹೋಮಿಯೋಪತಿ, ಪಿಜೆ ಎಕ್ಸ್ಟೆನ್ಶನ್ ದಾವಣೆಗೆರೆ ಇವರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ್ದ ದೂರಿನ ವಿರುದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ.

ದೂರುದಾರರು ಕ್ರಾನಿಕ್ ಪ್ಯಾಂಕ್ರಿಯಾಟೈಟಿಸ್ ಕಾಯಿಲೆಯ ರೋಗಿಯಾಗಿದ್ದು, ಎದರುದಾರರನ್ನು ಸಂಪರ್ಕಿಸಿದಾಗ ರೂ.40,000/- ಗಳನ್ನು ಪಾವತಿಸಿದರೆ, 3 ವರ್ಷಗಳ ಕಾಲ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡುವುದಾಗಿ ಭರವಸೆ ನೀಡಿರುತ್ತಾರೆ. ಅದರಂತೆ ದೂರುದಾರರು ದಿ: 29-03-2024 ಮತ್ತು ದಿ: 01-04-2024 ರಂದು ರೂ. 40 ಸಾವಿರಗಳನ್ನು ಪಾವತಿಸಿರುತ್ತಾರೆ.

ತದನಂತರ ಎದುರುದಾರರು ದೂರುದಾರರಿಗೆ ಯಾವುದೇ ರೀತಿಯ ಚಿಕಿತ್ಸೆ/ಔಷಧಿಗಳನ್ನು ಕೊಟ್ಟಿರುವುದಿಲ್ಲ. ಅನೇಕ ಬಾರಿ ಕೇಳಿಕೊಂಡರೂ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡದೇ ಇರುವ ಕಾರಣ ಸ್ಥಳೀಯ ರಾಜಕುಮಾರ್ ಡಯಾಗ್ನೊಸ್ಟಿಕ್, ಶಿವಮೊಗ್ಗ ಇವರ ಬಳಿ ಚಿಕಿತ್ಸೆ ಪಡೆದಿದ್ದಕ್ಕೆ ರೂ.50,000 ಖರ್ಚಾಗಿರುತ್ತದೆ. ಎದುರುದಾರರು ರೂ.40,000/- ಗಳನ್ನು ಪಡೆದು 3 ವರ್ಷಗಳವರೆಗೆ ಹೋಮಿಯೋಪತಿ ಚಿಕಿತ್ಸೆ/ಔಷಧಿಗಳನ್ನು ಕೊಡದೇ ಸೇವಾ ನ್ಯೂನ್ಯತೆ ಎಸಗಿರುತ್ತಾರೆ ಎಂದು ಆಯೋಗದ ಮುಂದೆ ದೂರನ್ನು ಸಲ್ಲಿಸಿರುತ್ತಾರೆ.

ದೂರುದಾರರು ಸಲ್ಲಿಸಿರುವ ಪ್ರಮಾಣಪತ್ರ, ದಾಖಲಾತಿಗಳನ್ನು ಪರಿಶೀಲಿಸಿ ದೂರುದಾರರ ವಾದವನ್ನು ಆಲಿಸಿ, ಎದುರುದಾರರು ಹಣವನ್ನು ಪಡೆದು ಚಿಕಿತ್ಸೆ/ಔಷಧಿಗಳನ್ನು ನೀಡದೇ ಸೇವಾನ್ಯೂನ್ಯತೆ ಎಸಗಿದ್ದಾರೆ ಎಂದು ಆಯೋಗ ತೀರ್ಮಾನಿಸಿ, ದೂರನ್ನು ಪುರಸ್ಕರಿಸಿ ಎದುರುದಾರರು ದೂರುದಾರರಿಂದ ಪಡೆದ ರೂ.40,000/- ಗಳಿಗೆ ಶೇ.9 ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡಲು ಹಾಗೂ ಕ್ರಮವಾಗಿ ಪರಿಹಾರವಾಗಿ, ಮಾನಸಿಕ ಹಿಂಸೆಗೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ರೂ.8000 ಮತ್ತು 5000 ಗಳನ್ನು ಈ ಆದೇಶವಾದ 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದಲ್ಲಿ, ಶೇ.12 ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು ಎಂದು ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನು ಒಳಗೊಂಡ ಪೀಠವು ದಿ: 30-06-2025 ರಂದು ಆದೇಶಿಸಿದೆ
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು