Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ಬಂದಿಗಳಿಗಾಗಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ


ಧಾರವಾಡ ಮಾರ್ಚ 21: ಧಾರವಾಡ ಕೇಂದ್ರ ಕಾರಾಗೃಹ, ಸಾಧನಾ ಸಂಸ್ಥೆ ಮತ್ತು ಪ್ರಿಜನ್ ಮಿನಿಸ್ಟರಿ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಮಾರ್ಚ್ 18, 2025 ರ ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಕಾರಾಗೃಹದ ಮಹಿಳಾ ವಿಭಾಗದಲ್ಲಿರುವ ಮಹಿಳಾ ಬಂದಿಗಳಿಗಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.



ಸಾಧನಾ ಸಂಸ್ಥೆಯ ಮುಖ್ಯಸ್ಥೆ ಇಸಾಬೆಲ್ ಕ್ಸೆವಿಯರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಧನಾ ಸಂಸ್ಥೆಯು ಕಾರಾಗೃಹದ ಮಹಿಳಾ ಬಂದಿಗಳಿಗಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಏರ್ಪಡಿಸಿದ್ದು, ಮಹಿಳಾ ಬಂದಿಗಳು ಯಾವುದೇ ರೀತಿಯ ಮಾನಸಿಕ ಒತ್ತಡಗಳಿಗೆ ಒಳಗಾಗದಂತೆ ಆರೋಗ್ಯಕರ ಜೀವ ರೂಪಿಸಿಕೊಳ್ಳಲು ಹಲವಾರು ಚಟುವಟಿಕೆಗಳನ್ನು ಬಂದಿಗಳಿಗಾಗಿ ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಲು ಸದಾ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.



ಬೆಥನಿ ಕನ್ಯಾಸ್ರ್ತೀಯರ ಸಂಸ್ಥೆಯ ಪ್ರಾಂತ್ಯಾಧಿಕಾರಿ ಸಿಸ್ಟರ್ ಸಾಲಿ ಡಿಸೋಜಾ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಪ್ಪು ಮಾಡಿ ಕೆಲವರು ಬಂದಿಖಾನೆ ನಿವಾಸಿಗಳಾಗಿದ್ದು, ಕಾರಾಗೃಹವಾಸದಲ್ಲಿದ್ದಾರೆ. ಕೆಲವರು ತಪ್ಪು ಮಾಡಿಯೂ ಕಾನೂನಿಂದ ತಪ್ಪಿಸಿಕೊಂಡು ಹೊರಗಡೆ ಇದ್ದಾರೆ. ಕಾರಾಗೃಹವು ಮನಃಪರಿವರ್ತನೆಗಿರುವ ಒಂದು ಅವಕಾಶ ಎಂದು ಅರಿತುಕೊಳ್ಳಬೇಕು. ಜೊತೆಯಲ್ಲಿದ್ದವರನ್ನು ಪ್ರೀತಿಸಿ, ಗೌರವಿಸುವುದು ಮುಖ್ಯವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಡಾ. ಸಂಗೀತಾ ಮಾನೆ, ಸಿಸ್ಟರ್ ಅಲ್ಫಿನಾ ರೋಡ್ರಿಕ್ಸ್, ಸಂಸ್ಥೆಯ ಜೈಲರ ಮಹಾದೇವಿ ಮರಕಟ್ಟಿ ಅವರು ಉಪಸ್ಥಿತರಿದ್ದರು.



ಮಹಿಳಾ ಬಂದಿ ಸುನಂದಾ ಹುಬ್ಬಳ್ಳಿ ಅವರು ಪ್ರಾರ್ಥಿಸಿದರು. ಶಿಕ್ಷಕ ಪಿ.ಬಿ.ಕುರಬೆಟ್ಟ ಅವರು ಸ್ವಾಗತಿಸಿದರು. ಸಂಸ್ಥೆಯ ವೈಶಾಲಿ ನಾಯ್ಕ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಕಾರಾಗೃಹ ವಾಸಿಗಳಾದ ಮಹಿಳೆಯರು, ಕಾರಾಗೃಹ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು