Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯಮ ಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ: ಆಸಕ್ತರಿಂದ ಅರ್ಜಿ ಆಹ್ವಾನ



ಕೊಪ್ಪಳ ಜುಲೈ 10 : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಕೊಪ್ಪಳ ಇವರ ವತಿಯಿಂದ ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗ ಪರಿಶಿಷ್ಟ ಜಾತಿಯ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹಿರಾತು ಮತ್ತು ಮಾರುಕಟ್ಟೆಯ ಕುರಿತು ನೋಂದಣೆ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಇದಕ್ಕಾಗಿ ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು, ಎಸ್.ಎಸ್.ಎಲ್.ಸಿ. ಆಗಿರಬೇಕು. ಆಸಕ್ತರು ಕೊಪ್ಪಳ ನಗರಸಭೆ ಎದುರುಗಡೆ ಇರುವ ಜಿಲ್ಲಾ ಕೈಗಾರಿಕಾ ಕೇಂದ್ರ, ಸಿಡಾಕ್ ಜಂಟಿ ನಿರ್ದೇಶಕರ ಕಛೇರಿಗೆ ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಶನ್ ಕಾರ್ಡ್ಗಳ ಝರಾಕ್ಸ್ ಪ್ರತಿಗಳು ಹಾಗೂ 2 ಪಾಸಪೋರ್ಟ್ ಸೈಜ್ ಫೋಟೋಗಳೊಂದಿಗೆ ಜುಲೈ 16ರ ರೊಳಗೆ ಅರ್ಜಿಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 6362557332 ಅಥವಾ 7204016012 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ