Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ





ಬಳ್ಳಾರಿ,ಜು.



ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.



ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿದೆ.



ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.



ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ವಿವಿಧ ಇಲಾಖೆಗಳ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿರುವ ಅನುಭವ ಹೊಂದಿರಬೇಕು. ಬೀದಿನಾಟಕ ತಂಡವು ನೋಂದಾಯಿತ ತಂಡವಾಗಿರಬೇಕು.



ನಿಗದಿತ ಅರ್ಜಿ ನಮೂನೆಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಹಿಂಭಾಗ, ಬಳ್ಳಾರಿ ಇವರಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜುಲೈ 21 ರ ಒಳಗಾಗಿ ಸಲ್ಲಿಸಬೇಕು ಎಂದು ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ