Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2026ನೇ ಸಾಲಿನ ಪದ್ಮ ಶ್ರೇಣಿಯ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ





ಬೆಂಗಳೂರು, ಜೂನ್ 09,  ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ, ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2026ನೇ ಸಾಲಿನ ಪದ್ಮ ಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ', ‘ಪದ್ಮ ಭೂಷಣ' ಮತ್ತು ‘ಪದ್ಮಶ್ರೀ ಪ್ರಶಸ್ತಿ’ಗಳಿಗೆ ಸಾಧಕರ ಹೆಸರುಗಳನ್ನು ಶಿಫಾರಸ್ಸು ಮಾಡಲು ಆಹ್ವಾನಿಸಲಾಗಿದೆ.



2026ನೇ ಸಾಲಿನ ಪದ್ಮ ಶ್ರೇಣಿಯ ಪ್ರಶಸ್ತಿಗಳಿಗೆ ಅನ್ವಯಿಸುವ ನಿಯಮಾವಳಿಗಳು https://padmaawards.gov.in ರಲ್ಲಿ ಲಭ್ಯವಿದ್ದು, ಅರ್ಹ ಹೆಸರುಗಳನ್ನು ಶಿಫಾರಸ್ಸು ಮಾಡುವಾಗ ಕೇಂದ್ರ ಸರ್ಕಾರ ಸೂಚಿಸಿರುವ ಅಂಶಗಳನ್ನು ಪರಿಗಣಿಸುವುದು.



ಮೇಲೆ ಸೂಚಿಸಿದ ಕ್ಷೇತ್ರಗಳಲ್ಲಿ ನೀಡಬಹುದಾದ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಸಂಬಂಧಿಸಿದ ಶಿಫಾರಸ್ಸಿನ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯು 2025 ನೇ ಜುಲೈ 31 ರಂದು ಮುಕ್ತಾಯಗೊಳ್ಳುತ್ತದೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.



ರಾಜ್ಯ ಸರ್ಕಾರವು ಪ್ರಸ್ತಾವನೆಗಳು ಪರಿಶೀಲಿಸಿ 2025ನೇ ಜುಲೈ 31 ರೊಳಗಾಗಿ ಕೇಂದ್ರ ಸರ್ಕಾರಕ್ಕೆ ಆನ್ಲೈ ನ್ ಮೂಲಕ ಮಾತ್ರ ಕಳುಹಿಸಬೇಕಾಗಿರುವುದರಿಂದ ಪದ್ಮ ಪ್ರಶಸ್ತಿಗಳಿಗೆ ಶಿಫಾರಸು ಮಾಡುವ ಪ್ರಸ್ತಾವನೆಗಳನ್ನು ಸಂಬಂಧಿಸಿದ ಇಲಾಖೆಗಳು 2025ನೇ ಜುಲೈ 15 ರೊಳಗೆ ಸಲ್ಲಿಸುವುದು ಹಾಗೂ ಸಾಫ್ಟ್ ಪ್ರತಿಗಳನ್ನು ಇ-ಮೇಲ್ ವಿಳಾಸ: [email protected] ಕ್ಕೆ ಕಳುಹಿಸುವುದು. 2025ನೇ ಜುಲೈ 15 ರ ನಂತರ ಬರುವ ಯಾವುದೇ ಪ್ರಸ್ತಾವನೆ /ಮನವಿಗಳನ್ನು ಪರಿಗಣಿಸಲು ಸಾಧ್ಯವಾಗುವುದಿಲ್ಲವೆಂದು ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು