Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಡಿ.ಇಡಿ ತರಬೇತಿಗೆ ಅರ್ಜಿ ಆಹ್ವಾನ





ಶಿವಮೊಗ್ಗ,ಜೂ.23 ಕರ್ನಾಟಕ ಸರ್ಕಾರದ ವತಿಯಿಂದ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರಕ್ಕೆ ಶಿಕ್ಷಕರಾಗಲು ಎರಡು ವರ್ಷಗಳ ವಿಶೇಷ ಡಿ.ಇಡಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜು.12 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.50(ಎಸ್‌ಸಿ, ಎಸ್‌ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊAದಿಗೆ ತೇರ್ಗಡೆಯಾಗಿರಬೇಕು. ಈ ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ.

https://nber-rehabcouncil.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನ ಶುಲ್ಕ ಇರುವುದಿಲ್ಲ.

ಡಿ.ಇಡಿ.ಎಸ್‌ಪಿಲ್.ಇಡಿ(VI)- ಹೆಲೆನ್ ಕೆಲ್ಲರ್ ಸರ್ಕಾರಿ ಟೀಚರ್ ಟ್ರೆöÊನಿಂಗ್ ಸೆಂಟರ್ ಫಾರ್ ವಿಜುಯಲಿ ಹ್ಯಾಂಡಿಕ್ಯಾಪ್ಡ್-ಕೆಕೆ016, ಡಿ.ಇಡಿ.ಎಸ್‌ಪಿಎಲ್.ಇಡಿ(HI)- ಗವರ್ನ್ಮೆಂಟ್ ಟೀಚರ್ ಟ್ರೆöÊನಿಂಗ್ ಸೆಂಟರ್ ಫಾರ್ ಇಯರಿಂಗ್ ಹ್ಯಾಂಡಿಕ್ಯಾಪ್ಡ್-ಕೆಕೆ015 ತರಬೇತಿ ಕಾರ್ಯಕ್ರಮ ನಡೆಸಲಾಗುತ್ತದೆ.

ಈ ತರಬೇತಿಯನ್ನು ಪಡೆದರೆ, ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳರಡರಲ್ಲೂ ಶಿಕ್ಷಕರಾಗಬಹುದು. ವಿಕಲಚೇತನರ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ಶಿಕ್ಷಕರಾಗಬಹುದು. ಸಿಬಿಎಸ್‌ಸಿ ಶಾಲೆಗಳಲ್ಲಿ ಶಿಕ್ಷಕರಾಗಬಹುದು, ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು. ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ರಿಗಳಾಗಿ ಕಾರ್ಯ ನಿರ್ವಹಿಸಬಹುದು. ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು. ರಾಷ್ಟಿçÃಯ ಸಂಸ್ಥೆಗಳು/ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಬಹುದು. ಮಾತಿನ ತರಬೇತಿ ಘಟಕದಲ್ಲೂ ಕಾರ್ಯ ನಿರ್ವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 0821 2491600 ಹಾಗೂ ತರಬೇತಿ ಸಂಯೋಜಕರಾದ ಆಶಾ.ವಿ ಹಿರೇಮಠ್-9113561620, ಟಿ.ಡಿ.ಮಂಜುನಾಥ್-9686762378 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು