Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರು - ಮಕ್ಕಳು ಅನೈತಿಕ ಸಾಗಾಣಿಕೆಗೆ ಒಳಗಾಗುತ್ತಿರುವುದು ದುರದೃಷ್ಟಕರ : ನ್ಯಾ. ಸಂತೋಷ್ಎಂ.ಎಸ್.





ಶಿವಮೊಗ್ಗ : ಪೆಬ್ರವರಿ 11 :  : ದೇಶ ಸ್ವಾತಂತ್ರ್ಯಾ ನಂತರ ಹಲವು ದಶಕಗಳ ನಂತರವೂ ಒತ್ತಾಯ ಪೂರ್ವಕ ದುಡಿಮೆ, ಲೈಂಗಿಕ ದೌರ್ಜನ್ಯ, ಭಿಕ್ಷಾಟನೆ ಮತ್ತು ಕಾನೂನು ಬಾಹಿರ ಅಂಗಾಂಗಗಳ ಜೋಡಣೆ ರೂಪದಲ್ಲಿ ಇಂದು ಹಲವಾರು ಮಹಿಳೆಯರು ಮತ್ತು ಮಕ್ಕಳು ಅನೈತಿಕ ಸಾಗಾಣಿಕೆಗೆ ಒಳಗಾಗುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ಎಂ.ಎಸ್.ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ಇಲಾಖೆ ಮತ್ತು ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಕಾಯ್ದೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮಾನವ ಸಾಗಾಣಿಕೆಯು ಒಂದು ಘೋರ ಅಪರಾಧವಾಗಿದೆ. ಪ್ರಪಂಚದಲ್ಲೆಡೆ ಅದರ ಪ್ರಭಾವವಿದ್ದು, ಅಸಮಾನತೆ. ತಾರತಮ್ಯತೆ ಮತ್ತು ದುರ್ಬಲತೆಗೆ ಕಾರಣವಾಗಿದೆ. ಸಾಮಾನ್ಯ ಜನರ ಆಸೆ-ಆಕಾಕ್ಷೆಗಳನ್ನು ಬಳಸಿ ಲಾಭಗಳಿಸುತ್ತಿರುವ ಮಾನವ ಸಾಗಾಣಿಕೆದಾರರು ಅವರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದರು.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾನವ ಸಾಗಾಣಿಕೆದಾರರನ್ನು ಕಾನೂನಿನ ಪರಿಮಿತಿಯೊಳಗೆ ತರುವುದು ಮಾತ್ರವಲ್ಲದೆ ಸಂತ್ರಸ್ಥರಿಗೆ ಸುರಕ್ಷಿತ ಮತ್ತು ಉತ್ತಮ ಪುನರ್ವಸತಿ ಕಲ್ಪಿಸಲು ಬದ್ಧವಾಗಿದೆ ಎಂದರು.

ಕಳೆದ ಒಂದೂವರೆ ವರ್ಷದಲ್ಲಿ ಇಂತಹ ಯಾವುದೇ ಪ್ರಕರಣ ದಾಖಲಾಗಿಲ್ಲದಿರುವುದು ಸಮಾಧಾನದ ಸಂಗತಿಯೇ ಆಗಿದ್ದರೂ 200ಕ್ಕೂ ಹೆಚ್ಚಿನ ಫೋಕ್ಸೋ ಮತ್ತು 50ಕ್ಕೂ ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿಯಾಗಿದೆ ಎಂದ ಅವರು, ಈ ಎಲ್ಲಾ ಅನಿಷ್ಟಗಳ ನಿಯಂತ್ರಣಕ್ಕಾಗಿ 15 ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ. ಪ್ರಕರಣವನ್ನು ದಾಖಲಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧವೂ ಕಾನೂನಿನಲ್ಲಿ ಕ್ರಮಕ್ಕೆ ಅವಕಾಶ ಒದಗಿಸಲಾಗಿದೆ ಎಂದರು.

ರಾಜ್ಯದೊಳಗೆ ವಲಸಿಗರ ವಸತಿ ಸಂಖ್ಯೆಯೂ ಹೆಚ್ಚಾಗುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಲಾಗಿದೆ. ವಲಸಿಗರು ತೋಟದ ಮನೆಗಳಲ್ಲಿ ವಾಸವಾಗಿದ್ದು, ಕಾರ್ಯನಿರ್ವಹಿಸುತ್ತಿದ್ದಾರೆ. ಜವಾಬ್ದಾರಿಯುತ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕಳ್ಳಸಾಗಾಣಿಕೆ ಆಗಬಹುದಾದ ಸಾಧ್ಯತೆಗಳಿದ್ದರೆ, ಅದನ್ನು ಪರಿಶೀಲಿಸಿ, ಅವರನ್ನು ರಕ್ಷಿಸುವಲ್ಲಿ ಅಗತ್ಯ ಕ್ರಮ ವಹಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಡಿ.ವೈ.ಎಸ್ಪಿ. ಬಾಬು ಅಂಜನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಬಾಲ ನ್ಯಾಯ ಮಂಡಳಿ ಅಧ್ಯಕ್ಷೆ ಶ್ರೀಮತಿ ರೇಖಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ಖಾನ್, ಮಂಜುನಾಥಪಾಟೀಲ್ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಭಾರತಿ ಆರ್.ಬಣಕಾರ್ಅವರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ