Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಪುನರ್ವವಸತಿ ಕೇಂದ್ರದ ಮೂಲಕ ವಿಕಲಚೇತನರ ಮನೆ ಬಾಗಿಲಿಗೆ ವಿವಿಧ ಸೌಲಭ್ಯ ಒದಗಿಸಲು ಕ್ರಮ : ಜಗದೀಶ್.ಜಿ











ಬೆಂಗಳೂರು ನಗರ ಜಿಲ್ಲೆ, ಮಾರ್ಚ್ 18 : ವಿಕಲಚೇತನರನ್ನು ಗುರುತಿಸಿ ಅವರಿಗೆ ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿ ಸೇವೆಗಳನ್ನು ಅವರ ಮನೆ ಬಾಗಿಲಿನಲ್ಲೇಯೇ ಕಲ್ಲಿಸಿ ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ ಜಿಲ್ಲಾ ಪುನರ್ವವಸತಿ ಕೇಂದ್ರಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲಾ ಪುನರ್ವವಸತಿ ಕೇಂದ್ರದ ಮೂಲಕ ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ಅವರು ತಿಳಿಸಿದರು.



ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ, ಜಿಲ್ಲಾ ಪುನರ್ವವಸತಿ ಕೇಂದ್ರದ, ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ಬೆಂಗಳೂರು ನಗರ ಜಿಲ್ಲಾ ಪುನರ್ವವಸತಿ ಯೋಜನೆಯನ್ನು ಕುಮಾರ ಪಾರ್ಕ್ ಟ್ರಸ್ಟ್(ರಿ), ಈ ಸ್ವಯಂ ಸೇವಾ ಸಂಸ್ಥೆಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕೇಂದ್ರದಲ್ಲಿ ತಪಾಸಣಾ ಶಿಬಿರಗಳ ಮೂಲಕ ವಿಕಲಚೇತನರ ಸಮೀಕ್ಷೆ ಹಾಗೂ ಗುರುತಿಸುವಿಕೆ, ವಿಕಲತೆಯನ್ನು ತಡೆಗಟ್ಟುವುದು. ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ ಕಾರ್ಡ್) ಮಾಡಿಸುವುದು. ಅಗತ್ಯ ಸಾಧನ ಸಲಕರಣೆಗಳನ್ನು ನೀಡುವುದು. ರಿಯಾಯಿತಿ ದರದ ಬಸ್ ಪಾಸ್, ಅಂಗವಿಕಲತೆಯ ನಿವಾರಣಾ ಶಸ್ತ್ರಚಿಕಿತ್ಸೆಗೆ ಮಾಹಿತಿ ನೀಡುವುದು ಹಾಗೂ ಇಲಾಖೆಯ ಎಲ್ಲಾ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅಗತ್ಯ ಸೌಲಭ್ಯಗಳನ್ನು ಹಾಗೂ ಪುನರ್ವಸತಿಯನ್ನು ಸರ್ಕಾರದಿಂದ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.



ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸೌಲಭ್ಯಗಳನ್ನು ಪಡೆಯಲು, ಜಿಲ್ಲಾ ಪುನರ್ವವಸತಿ ಕೇಂದ್ರ, ಕುಮಾರ ಪಾರ್ಕ್ ಟ್ರಸ್ಟ್(ರಿ), ದೂರವಾಣಿ ಸಂಖ್ಯೆ-080-41179472 ಅನ್ನು ಸಂಪರ್ಕಿಸಿ, ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸದುಪಯೋಗ ಪಡಿಸಿಕೊಳ್ಳಬೇಕಾಗಿ ತಿಳಿಸಿದರು.



ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಅಪರ ಜಿಲ್ಲಾಧೀಕಾರಿಗಳಾದ ಡಾ.ಜಗದೀಶ್.ಕೆ, ಜಿಲ್ಲಾ ಅಂಗವಿಕಲಕರ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ ಕೆ, ಕುಮಾರ ಪಾರ್ಕ್ ಟ್ರಸ್ಟ್(ರಿ)ನ ಸದಸ್ಯ ಕಾರ್ಯದರ್ಶಿ ರಾಜು ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




























Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ