Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು: ಜಿಲ್ಲಾಧಿಕಾರಿ ಜಗದೀಶ ಜಿ ಎಚ್ಚರಿಕೆ.





ಬೆಂಗಳೂರು ನಗರ ಜಿಲ್ಲೆ ಮೇ. 6  :- ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಎಚ್ಚರಿಕೆ ನೀಡಿದ್ದಾರೆ.

ಬಕ್ರೀದ್ ಸಂದರ್ಭದಲ್ಲಿ ಒಂಟೆ, ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.



ಜಿಲ್ಲೆಗೆ ಬರುವ ಸಾಗಣೆ ವಾಹನಗಳ ತಪಾಸಣೆ ನಡೆಸಿ ಗೋವು, ಒಂಟೆಗಳ ಅಕ್ರಮ ಸಾಗಣೆ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ತಪಾಸಣೆ ನಡೆಸಿದ ವಾಹನಗಳು ಅನಧಿಕೃತವಾಗಿ ಗೋವು / ಒಂಟೆಗಳನ್ನು ಸಾಗಿಸುತ್ತಿದ್ದಲ್ಲಿ ಅವುಗಳನ್ನು ವಶಪಡಿಸಿಕೊಂಡು ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದು ಮಾತ್ರವಲ್ಲದೆ ವಾಹನದಲ್ಲಿರುವ ಗೋವುಗಳನ್ನು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಗೋಶಾಲೆಗಳಿಗೆ ಅದೇ ವಾಹನದಲ್ಲಿ ಸಾಗಿಸಿ ಸುರಕ್ಷಿತಗೊಳಿಸುವಂತೆ ಸೂಚನೆ ನೀಡಿದರು.



‘ಒಂಟೆ, ಗೋವುಗಳ ಹತ್ಯೆ ಮಾಡುವುದು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಣೆ ಮೂಲಕ ಜಿಲ್ಲೆಗೆ ತರುವುದು ಅಪರಾಧವಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಕರಪತ್ರ ಹಾಗೂ ಆಟೊರಿಕ್ಷಾ ಪ್ರಚಾರ ಮೂಲಕ ಅರಿವು ಮೂಡಿಸಬೇಕು ಎಂದು ತಿಳಿಸಿದ ಅವರು ನಗರದ ಹೊರ ವಲಯಗಳಲ್ಲಿ, ಅಂದರೆ ಮೈಸೂರು ರಸ್ತೆ (ಕುಂಬಳಗೂಡು), ತುಮಕೂರು ರಸ್ತೆ (ಎಕ್ಸಿಬ್ಯೂಷನ್ ಕೇಂದ್ರ) ಮಾಗಡಿ ರಸ್ತೆ (ತಾವರೆಕೆರೆ), ಹೊಸೂರು ರಸ್ತೆ (ಅತ್ತಿ ಬೆಲೆ), ಹಳೆ ಮದ್ರಾಸ್ ರಸ್ತೆ (ಹೊಸಕೋಟೆ ಹತ್ತಿರ) ಸೇರದ ಒಟ್ಟು 10 ತಪಾಸಣಾ ಕೇಂದ್ರಗಳನ್ನು ಸಾರಿಗೆ ಇಲಾಖೆ ನೇತೃತ್ವದಲ್ಲಿ ನಿರ್ಮಿಸಿ, ಎಲ್ಲಾ ಕೇಂದ್ರಗಳಲ್ಲಿ ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸಿದರು.



ಅಕ್ರಮವಾಗಿ ಒಂಟೆ/ ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಬೆಂಗಳೂರು ನಗರ ಪಾಲಿಕೆಗಳ ಸಹಾಯವಾಣಿ 1533ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಹಬ್ಬದ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರ ವಹಿಸಬೇಕು.



ಪ್ರಾಣಿ ವಧೆಯಿಂದ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಯನ್ನು ನಿಯಮಾನುಸಾರ ನಿರ್ವಹಣೆ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.



ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಪಶುಪಾಲನ ಇಲಾಖೆಯ ಉಪ ನಿರ್ದೇಶಕ ಡಾ. ಪರಮೇಶ್ವರ್ ರವರು ಹಾಗೂ ಜಿ. ಬಿ. ಎ ಉಪ ನಿರ್ದೇಶಕರಾದ ಡಾ. ಚಂದ್ರಯ್ಯ ರವರು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ