Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುತ್ತೂರು: ಜೆ.ಎಸ್.ಎಸ್ ಉಚಿತ ವಸತಿ ಶಾಲೆಗೆ ಅರ್ಜಿ ಆಹ್ವಾನ


ಬಳ್ಳಾರಿ,ಮಾ.31

ಮೈಸೂರಿನ ಸುತ್ತೂರು ಕ್ಷೇತ್ರದ ಜೆ.ಎಸ್.ಎಸ್ ಉಚಿತ ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಭಾಗದ ಬಡ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ, 1 ರಿಂದ 8ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಪೋಷಕರು ಶಾಲೆಯ ಅಧಿಕೃತ ವೆಬ್‌ಸೈಟ್‌ಗಳಾದ www.jssschoolsuttur.org ಅಥವಾ www.jssonline.org ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ.

ಏಪ್ರಿಲ್ 2 ರಿಂದ ಅರ್ಜಿ ವಿತರಣೆ ಪ್ರಾರಂಭ, ಮೇ 16 ಅರ್ಜಿ ಸಲ್ಲಿಸಲು ಕೊನೆಯ ದಿನ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ “ಮುಖ್ಯೋಪಾಧ್ಯಾಯರು, ಜಿ.ಎಸ್.ಎಸ್. ಸಂಸ್ಥೆಗಳು, ಸುತ್ತೂರು, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ – 571129” ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿಯ ಜೊತೆಗೆ ವಿದ್ಯಾರ್ಥಿಯ ಹಿಂದಿನ ತರಗತಿಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊ.7411486938, ದೂ.08221-232332 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ