Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಡುಗೊಲ್ಲ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ


ರಾಯಚೂರು,ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿಗೆ ಅನುಷ್ಠಾನಗೊಂಡಿರುವ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳ ಆಹ್ವಾನಿಸಲಾಗಿದೆ.

ನಿಗಮದ ಯೋಜನೆಗಳು; ಸ್ವಯಂ ಉದ್ಯೋಗ ನೇರಸಾಲ ಯೋಜನೆ. ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು). ಗಂಗಾ ಕಲ್ಯಾಣ ಯೋಜನೆ. ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ). ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆಯಡಿ ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಇದೇ 2024ರ ಆಗಸ್ಟ್ 31ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.



ಅರ್ಹತೆಗಳು; ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಹಿವಕ /155/ಬಿಸಿಎ/2020, ದಿನಾಂಕ:28/09/2020ರನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.



ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ 3.50/-ಲಕ್ಷ ರೂ.ಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.



ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ 98,000/- ರೂ. ಮತ್ತು ನಗರ ಪ್ರದೇಶದವರಿಗೆ 1,20,000/-ರೂ.ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಿದೆ.



ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾoಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.



ಹೆಚ್ಚಿನ ಮಾಹಿತಿ ನಿಗಮದ ಸಹಾಯವಾಣಿ ಸಂಖ್ಯೆ: 080-22374848 ಮತ್ತು 7899899039ಗೆ ಸಂಪರ್ಕಿಸುವoತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ