Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರಾಮುವಿ ವಿಶ್ವವಿದ್ಯಾನಿಲಯ: ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ


ಬಳ್ಳಾರಿ,ಏ.02

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ವರ್ಷದ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ವಿವಿಧ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

*ಕೋರ್ಸ್ಗಳು:*

ಪದವಿ: ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ.

ಸ್ನಾತಕೋತ್ತರ ಪದವಿ: ಎಂ.ಎ., ಎಂ.ಕಾಮ್., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಲಿಬ್.ಐ.ಎಸ್ಸಿ.

ಇತರೆ: ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳು.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ರಕ್ಷಣಾ ಇಲಾಖೆ ಅಥವಾ ಮಾಜಿ ಸೈನಿಕರಿಗೆ ಹಾಗೂ ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ.

ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತೀಯ ಲಿಂಗಿಗಳಿಗೆ ಯಾವುದೇ ಬೋಧನಾ ಶುಲ್ಕ ಇರುವುದಿಲ್ಲ.

ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ಪ್ರಾಸ್‌ಪೆಕ್ಟಸ್ ಓದಿಕೊಂಡು, ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರವೇಶಾತಿ ಪಡೆಯಲು ಏಪ್ರಿಲ್ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಆನ್-ಲೈನ್ ಸಹಾಯವಾಣಿ: 8800335638 / 8690544544 ಅಥವಾ ಮೊ.9986696487 ಗೆ ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ, ನಲ್ಲಚೆರವು ಪ್ರದೇಶ, ಬಳ್ಳಾರಿ-583102. ವಿದ್ಯಾರ್ಥಿಗಳು ನೇರವಾಗಿ ಈ ವಿಳಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕ ನಾಗೇಶ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ