Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಬಜೆಟ್ 2026–27 : ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ 2026–27ನೇ ಸಾಲಿನ ಬಜೆಟ್‌ನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಸರ್ಕಾರ ಘೋಷಿಸಿದೆ. ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಿ ಹೊಸ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ‘ಸಮಗ್ರ ಕರಾವಳಿ ಅಭಿವೃದ್ಧಿ ಯೋಜನೆ’ ಜಾರಿಗೆ ತರಲಾಗುತ್ತದೆ. ಈ ಯೋಜನೆಯ ಮೂಲಕ ಕರಾವಳಿ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಪ್ರವಾಸೋದ್ಯಮ ಕ್ಷೇತ್ರಕ್ಕೆ ಅಗತ್ಯವಿರುವ ಪರಿಣತ ಮಾರ್ಗದರ್ಶಕರನ್ನು ರೂಪಿಸುವ ಉದ್ದೇಶದಿಂದ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಪ್ರವಾಸ ಮಾರ್ಗದರ್ಶಕರಿಗೆ ಡಿಪ್ಲೋಮಾ ಕೋರ್ಸ್‌ ಆರಂಭಿಸಲಾಗುತ್ತದೆ. ಇದರಿಂದ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆಯಿದೆ.
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮುಳ್ಳಯ್ಯನಗಿರಿ – ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್-ವೇ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಜಾರಿಯಾದರೆ ಪ್ರವಾಸಿಗರಿಗೆ ಹೊಸ ಅನುಭವ ಸಿಗಲಿದೆ.
ಇದರ ಜೊತೆಗೆ ರಾಜ್ಯದಲ್ಲಿರುವ 844 ಸಂರಕ್ಷಿತ ಸ್ಮಾರಕಗಳು ಹಾಗೂ 1,000 ಅಸುರಕ್ಷಿತ ಸ್ಮಾರಕಗಳ ಸಂರಕ್ಷಣೆಗಾಗಿ “ಸ್ಮಾರಕ ಮಿತ್ರ” ಯೋಜನೆ ಜಾರಿಗೆ ತರಲಾಗುತ್ತದೆ. ಈ ಯೋಜನೆಯಡಿ 1,000 ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ ನೀಡಲಾಗುತ್ತದೆ ಹಾಗೂ ಅವರನ್ನು ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರಿಸಲಾಗುತ್ತದೆ.
ಈ ಕ್ರಮಗಳಿಂದ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಬಲ ಪಡೆದು ಆರ್ಥಿಕ ಚಟುವಟಿಕೆಗಳು ಮತ್ತು ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ