Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಬಜೆಟ್ 2026-27 : ಉನ್ನತ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು

ಬೆಂಗಳೂರು: “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ಘೋಷಣೆಯೊಂದಿಗೆ ಮಂಡನೆಯಾದ ಕರ್ನಾಟಕ ಬಜೆಟ್ 2026-27 ನಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ.
ರೂ.2,500 ಕೋಟಿ ವೆಚ್ಚದಲ್ಲಿ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಅನುಷ್ಠಾನಗೊಳ್ಳಲಿದ್ದು, ಇದರಡಿ ರಾಜ್ಯದ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಹಾಗೂ 11 ಪಾಲಿಟೆಕ್ನಿಕ್ ಸಂಸ್ಥೆಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳಾಗಿ ಅಭಿವೃದ್ಧಿಪಡಿಸಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಹಾಗೂ ಸ್ಟಾರ್ಟ್‌ಅಪ್ ಸಂಸ್ಕೃತಿಗೆ ಉತ್ತೇಜನ ನೀಡಲು 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆಯೂ ಇದೆ.
ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಸರ್ಕಾರ ಘೋಷಿಸಿದೆ.
ಇದೇ ವೇಳೆ ರಾಜ್ಯದ 25 ಸರ್ಕಾರಿ ಪದವಿ ಕಾಲೇಜುಗಳು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು ರೂ.31 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.
ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ, ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ