Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಸಾಪ; 10 ಸಾವಿರ ಸದಸ್ಯತ್ವ ನೋಂದಣಿ ಗುರಿ: ಕೇಶವ ಕಾಮತ್

ಮಡಿಕೇರಿ ಜು.10ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಇತ್ತೀಚಿಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನುಡಿದರು.

ಈಗಾಗಲೇ ಎಲ್ಲಾ ಕಾರ್ಯಕಾರಿ ಮಂಡಳಿಯ ಸದಸ್ಯರು, ತಾಲೂಕು ಅಧ್ಯಕ್ಷರುಗಳು, ಹೋಬಳಿ ಅಧ್ಯಕ್ಷರುಗಳು, ಶ್ರಮಪಡುತ್ತಿದ್ದು ಒಂದು ಸಾವಿರಕ್ಕೂ ಹೆಚ್ಚು ಸದಸ್ಯತ್ವ ನೋಂದಾಯಿಸಲಾಗಿದೆ. ಈ ವರ್ಷದ ಕೊನೆಯೊಳಗಾಗಿ 10 ಸಾವಿರ ಸದಸ್ಯರನ್ನು ಹೊಂದುವ ಗುರಿ ಹೊಂದಿದ್ದು ಎಲ್ಲರೂ ಸಹಕರಿಸಬೇಕು ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಪರಿಷತ್ತಿನ ಕಾರ್ಯಕಾರಿ ಮಂಡಳಿಯ ಎಲ್ಲಾ ಸದಸ್ಯರುಗಳು ಒಂದಾಗಿ ಎಲ್ಲಾ ಶಾಲೆ ಕಾಲೇಜುಗಳನ್ನು ಭೇಟಿಯಾಗಿ ಸದಸ್ಯತ್ವ ವನ್ನು ಅಭಿಯಾನದ ರೀತಿಯಲ್ಲಿ ತೊಡಗಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಪರಿಷತ್ತಿನಲ್ಲಿ ಈ ವರ್ಷ 35 ದತ್ತಿನಿಧಿ ಕಾರ್ಯಕ್ರಮಗಳಿದ್ದು ಅವನ್ನು ಶಾಲಾ ಕಾಲೇಜುಗಳಲ್ಲಿ ನಡೆಸುವ ಮೂಲಕ ಕನ್ನಡ ನಾಡು ನುಡಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ಕಾರ್ಯ ಆಗಬೇಕಾಗಿದೆ ಎಂದರು.

ಕಾರ್ಯಕಾರಿ ಸಮಿತಿಯ ಲೆಕ್ಕ ಪರಿಶೋಧನಾ ಸಲಹಾಕಾರ ಸಂಜೀವ್ ಜೋಶಿ ಮಾತನಾಡಿ ಪರಿಷತ್ತಿನ ಲೆಕ್ಕಪತ್ರ ವ್ಯವಸ್ಥಿತವಾಗಿ ನಿರ್ವಹಿಸುವ ಕುರಿತು ತಾಲೂಕು ಹೋಬಳಿ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಅವರಿಗೆ ಮಾಹಿತಿ ನೀಡಿದರು.

ಸದಸ್ಯರ ಪಟ್ಟಿಯಿಂದ ಮೃತಪಟ್ಟಿರುವ ಸದಸ್ಯರುಗಳ ಹೆಸರುಗಳನ್ನು ಈಗಾಗಲೇ ಗುರುತಿಸಿ ಕೇಂದ್ರಕ್ಕೆ ಕಳುಹಿಸಿದ್ದು ಮುಂದಿನ ಚುನಾವಣೆ ಸಂದರ್ಭದಲ್ಲಿ ಆ ಸದಸ್ಯರ ಹೆಸರನ್ನು ಚುನಾವಣಾ ಪಟ್ಟಿಯಿಂದ ತೆಗೆಯುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನಿರ್ ಅಹಮದ್, ರೇವತಿ ರಮೇಶ್, ಗೌರವಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಜಲಜ ಶೇಖರ್, ಸಹ ಕಾರ್ಯದರ್ಶಿ ಎ.ವಿ.ಮಂಜುನಾಥ್, ಸೋಮವಾರಪೇಟೆ ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ.ವಿಜೇತ್, ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ, ಶ್ರೀಮಂಗಲ ಹೋಬಳಿ ಅಧ್ಯಕ್ಷ ಉಳುವಂಗಡ ಕಾವೇರಿ ಉದಯ, ಮೂರ್ನಾಡು ಹೋಬಳಿ ಅಧ್ಯಕ್ಷ ಈರಮಂಡ ಹರಿಣಿ, ಸಿದ್ದಾಪುರ ಹೋಬಳಿ ಅಧ್ಯಕ್ಷ ಟಿ.ಎಚ್.ಮಂಜುನಾಥ್, ಐಗೂರು ಹೋಬಳಿ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್, ಶಾಂತಳ್ಳಿ ಹೋಬಳಿ ಅಧ್ಯಕ್ಷ ಸಿ.ಎಸ್. ನಾಗರಾಜ್, ಪೆನ್ನಂಪೇಟೆ ಹೋಬಳಿ ಖಜಾಂಜಿ ಚಂದನ್ ಕಾಮತ್, ಕಚೇರಿ ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ