Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ ನೆರವಾಗೋಣ : ಡಿಸಿ


ಶಿವಮೊಗ್ಗ,ಡಿ.8ಸಶಸ್ತç ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಸೈನಿಕ ಧ್ವಜ ದಿನಾಚರಣೆಯನ್ನು ಪ್ರತಿ ವರ್ಷ ಕೈಗೊಳ್ಳಲಾಗುತ್ತಿದ್ದು, ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರಿಗೆ ನೆರವಾಗೋಣ ಎಂದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಸೋಮವಾರ ಸಶಸ್ತç ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಧ್ವಜ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

1949 ರಿಂದ ಪ್ರತಿ ವರ್ಷ ಸೈನಿಕ ಧ್ವಜ ದಿನವನ್ನು ಆಚರಿಸಲಾಗುತ್ತಿದೆ. ಧ್ವಜ ದಿನಾಚರಣೆ ಅಂಗವಾಗಿ ಸಂಗ್ರಹವಾಗುವ ವಂತಿಗೆ ಹಣವನ್ನು ನಿವೃತ್ತ ಸೈನಿಕರ ಕುಟುಂಬ, ಅವರ ಅವಲಂಬಿತರ ಕಲ್ಯಾಣಕ್ಕಾಗಿ ಹಾಗೂ ಯುದ್ದದಲ್ಲಿ ಅಂಗವಿಕಲತೆಗೆ ಒಳಗಾದ ಸೈನಿಕರ ನೆರವಿಗಾಗಿ ಬಳಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಎಲ್ಲ ಅಧಿಕಾರಿಗಳು, ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ ಎಂದ ಅವರು ಶಿವಮೊಗ್ಗ ಜಿಲ್ಲೆ ಧ್ವಜ ವಂತಿಗೆ ಸಂಗ್ರಹದಲ್ಲಿ ಮತ್ತು ಕಲ್ಯಾಣ ಕಾರ್ಯಕ್ರಮಗಳಲ್ಲಿ ಮಾದರಿಯಾಗಲಿ ಎಂದರು ಆಶಿಸಿದರು.

ಪುರೋಹಿತರಾದ ನಾಗರಾಜ್ ಎಂಬುವವರು ಧ್ವಜ ದಿನಾಚರಣೆ ಅಂಗವಾಗಿ ರೂ.25000 ಗಳ ವಂತಿಗೆಯನ್ನು ನೀಡಿದ್ದು ಅವರನ್ನು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಗೌರವಿಸಿ, ನಾಗರಾಜ್‌ರವರು ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಸೈನಿಕ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ(ಪ್ರ)ರಾದ ಡಾ.ಸಿ.ಎ.ಹಿರೇಮಠ ಮಾತನಾಡಿ, ಈ ಬಾರಿ ಧ್ವಜ ವಂತಿಗೆಯ ಸಂಗ್ರಹದಲ್ಲಿ ಉತ್ತಮವಾಗಿ ಗುರಿ ಸಾಧನೆ ಮಾಡಲಾಗಿದೆ. ಧ್ವಜ ದಿನದ ಅಂಗವಾಗಿ ಸಂಗ್ರಹವಾಗುವ ವಂತಿಗೆ ಹಣದಿಂದ ನಿವೃತ್ತ ಸೈನಿಕರು, ಅವರ ಅವಲಂಬಿತರಿಗೆ ಅನುಕೂಲ ಮಾಡಿಕೊಡಲಾಗುವುದು. ವಂತಿಗೆ ಹಣ ಹೆಚ್ಚಾದರೆ ಹೆಚ್ಚಿನ ಅನುಕೂಲ ಸಾಧ್ಯವಾಗುತ್ತದೆ. ಆದ್ದರಿಂದ ಅಧಿಕಾರಿಗಳು, ಸಾರ್ವಜನಿಕ ಸಹಕಾರ ಸಿಕ್ಕರೆ ಒಳ್ಳೆಯದು ಎಂದರು.

ಈ ಸಂದರ್ಭದಲ್ಲಿ ಜಿಲ್ಲೆಯ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರ ಅವಲಂಬಿತರು, ಎನ್‌ಸಿಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ