Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಲಿಲ್ಲಿ’ ಚಲನಚಿತ್ರ ಟೀಸರ್ ಬಿಡುಗಡೆ

ಬೆಂಗಳೂರು : ಸ್ನೇಹಾಲಯಂ ಕ್ರಿಯೇಷನ್ಸ್ ಸಮರ್ಪಿಸಿ ಬೃಂದ ವಿದ್ಯಾ ಪಿಕ್ಚರ್ಸ್ ಬ್ಯಾನರ್‌ನ ಅಡಿಯಲ್ಲಿ ಹಗದೂರು ಅಶೋಕ್ ರೆಡ್ಡಿ,ಮುತ್ತುಸಂದ್ರ ವೆಂಕಟರಾಮ್ ಸತ್ಯವಾರ ನಾಗೇಶ್ ರವರು ಜಂಟಿಯಾಗಿ ನಿರ್ಮಿಸುತ್ತಿರುವ ‘ಲಿಲ್ಲಿ’ ಕನ್ನಡ ಚಲನಚಿತ್ರದ ಟೀಸರ್ ನ್ನು ಹೊಸಕೋಟೆ ಯಾದವ ಮಹಾಸಭಾ ಅಧ್ಯಕ್ಷ ಆನಂದಪ್ಪನವರು ತಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಿದರು.
ಸಾಕಷ್ಟು ಯುವ ಪ್ರತಿಭಾವಂತ ಕಲಾವಿದರು ಗ್ರಾಮೀಣ ಮಟ್ಟದಲ್ಲಿದ್ದರೂ ಸೂಕ್ತ ಅವಕಾಶವಿಲ್ಲದೆ ಪ್ರತಿಭಾವಂಚಿತರಾಗುತ್ತಿದ್ದಾರೆ .ಅಂತವರನ್ನು ಗುರತಿಸಿ ಪ್ರೋತ್ಸಾಹಿಸುವ ಕಾರ್ಯ ಚಿತ್ರರಂಗದವರಿ0ದ ಆಗಬೇಕು. ಹೊಸ ಹೊಸ ಕಲಾವಿದರು ಚಿತ್ರರಂಗಕ್ಕೆ ಬರಬೇಕು. .ಅಂತಹದ್ದರಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ಕೊಟ್ಟು ಚಲನಚಿತ್ರ ನಿರ್ಮಿಸಿದ ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಧನ್ಯವಾದಗಳನ್ನು ತಿಳಿಸಿದರು. ಸಿನಿಮಾ ನಿರ್ದೇಶಕನೊಬ್ಬನ ಜೀವನದಲ್ಲಿ ನಡೆಯುವ ಒಂದು ಘಟನೆ ಇಡೀ ಚಿತ್ರರಂಗವನ್ನು ಭಯಭೀತಿಗೊಳಿಸುವ ಕಥಾಹಂದರವಿರುವ ‘ಲಿಲ್ಲಿ’ ಚಿತ್ರದಲ್ಲಿ ಸುರೇಶ್ ಸೂರ್ಯ, ಖುಷಿಗೌಡ, ಅನು, ಅಶೋಕ್ ರೆಡ್ಡಿ, ಎಂ ವಿ ಸಮಯ್, ಚಂದ್ರಶೇಖರ್, ನಾಗೇಶ್, ಭಕ್ತರಹಳ್ಳಿ ರವಿ, ರಾಧಾ, ವೆಂಕಟರಾಮ್, ಬೇಬಿ ಜಯಲಲಿತ ಮೊದಲಾದವರು ನಟಿಸಿದ್ದಾರೆ
ಆರ್.ಕೆ. ಗಾಂಧಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ‘ಲಿಲ್ಲಿ’ ಸಿನಿಮಾ ಗೆ ಅನಿರುದ್ಧ ಶಾಸ್ತ್ರಿ ಸಂಗೀತ, ಪ್ರತಾಪ್ ಭಟ್ ಸಾಹಿತ್ಯ, ಬಿ ಯುವರಾಜ್ ಛಾಯಾಗ್ರಹಣ, ಸಂಕಲನ, ಸೂರ್ಯಕಿರಣ್‌ರ ನೃತ್ಯ ಸಂಯೋಜನೆ ಇದ್ದು ಡಾ ಪ್ರಭು ಗಂಜಿಹಾಳ , ಡಾ ವೀರೇಶ ಹಂಡಗಿ ಅವರ ಪತ್ರಿಕಾ ಪ್ರಚಾರವಿದೆ. ಸಧ್ಯ ಚಿತ್ರಕ್ಕೆ ಸಂಬ0ಧಿಸಿದ ಎಲ್ಲ ಕಾರ್ಯ ಭರದಿಂದ ಸಾಗಿದ್ದು ಸಿನಿಮಾವನ್ನು ಆಗಸ್ಟ್ ತಿಂಗಳಲ್ಲಿ ತೆರೆಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ನಿರ್ದೇಶಕ ಗಾಂಧಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ