Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ಪೊಲೀಸ್ ಪ್ರಕಟಣೆ,ಭೂ ಮಾಪನ ಇಲಾಖೆಯ ಸರ್ವೆಯರ್ ರಾಘವೇಂದ್ರ ಕುಲಕರ್ಣಿಗೆ ಜೈಲು ಶಿಕ್ಷೆ ದಂಡ ವಿಧಿಸಿ ಆದೇಶ





ಧಾರವಾಡ ಫೆ 21: ಕುಂದಗೋಳ ಭೂ ಮಾಪನ ಇಲಾಖೆ ಸರ್ವೆಯರ್ ರಾಘವೇಂದ್ರ ಶಂಕರರಾವ ಕುಲಕರ್ಣಿ ಅವರಿಗೆ ಲಂಚ ಪ್ರಕರಣದಲ್ಲಿ 04 ವರ್ಷ ಜೈಲು ಶಿಕ್ಷೆ ಮತ್ತು 20,000 ದಂಡ ವಿಧಿಸಿ ಧಾರವಾಡದ 03 ನೇ ಅಧಿಕ ಜಿಲ್ಲಾ ಸತ್ರ ಹಾಗೂ ವಿಶೇಷ ನ್ಯಾಯಾಲಯ ಆದೇಶಿಸಿದೆ.



ಧಾರವಾಡ ಲೋಕಾಯುಕ್ತ ಪೊಲೀಸ ಠಾಣೆ ಪ್ರಕರಣ ಸಂಖ್ಯೆ: 08/2019 ಕಲಂ. 07 (ಚಿ)

ಲಂಚ ಪ್ರತಿಬಂಧಕ ಕಾಯ್ದೆ-1988ರ ಆರೋಪಿ ರಾಘವೇಂದ್ರ ಶಂಕರರಾವ ಕುಲಕರ್ಣಿ, ಉದ್ಯೋಗ: ಸರ್ವೆಯರ್, ಭೂ ಮಾಪನ ಇಲಾಖೆ ಕುಂದಗೋಳ ಇವರಿಗೆ ಗೌರವಾನ್ವಿತ 03 ನೇ ಅಧಿಕ ಜಿಲ್ಲಾ ಸತ್ರ ಹಾಗೂ ವಿಶೇಷ ನ್ಯಾಯಾಲಯ, ಧಾರವಾಡದಲ್ಲಿ ದೋಷಿಯೆಂದು ತೀರ್ಮಾನಿಸಿ ಇಂದು ದಿನಾಂಕ: 21-02-2026 ರಂದು ತೀರ್ಪು ನೀಡಲಾಗಿರುತ್ತದೆ.



ಈ ಪ್ರಕರಣದಲ್ಲಿಯ ಫಿರ್ಯಾದಿದಾರ ಮಲ್ಲಿಕಾರ್ಜುನಗೌಡ ಭರಮಗೌಡ ಪಾಟೀಲ, ಸಾ: ಶಿರೂರ, ತಾ: ಕುಂದಗೋಳ ಇವರು ತಮ್ಮ ಕುಟುಂಬಕ್ಕೆ ಸಂಬಂಧಿಸಿದಂತೆ ಕುಂದಗೋಳ ತಾಲೂಕಿನ ಶಿರೂರ ಗ್ರಾಮದಲ್ಲಿರುವ ಸರ್ವೆ ನಂ 83/1, 83/1ಅ, 83/1ಬ ನೇದ್ದರಲ್ಲಿ ಒಟ್ಟು 9 ಎಕರೆ 8 ಗುಂಟೆ ಜಮೀನು ಇದ್ದು, ಈ ಜಮೀನುಗಳಲ್ಲಿ, 3 ಎಕರೆ 30 ಗುಂಟೆ, 3 ಎಕರೆ 30 ಗುಂಟೆ ಹಾಗೂ 1 ಎಕರೆ 28 ಗುಂಟೆ ಈ ಪ್ರಕಾರ ಉತಾರಗಳು ಜಂಟಿ ಹೆಸರಿನಲ್ಲಿದ್ದು, ಆ ಜಮೀನುಗಳು ಮೋಜಣಿ ಕಛೇರಿಯಲ್ಲಿ ಅಖಂಡ ಇದ್ದು, ಅದನ್ನು ಉತಾರಗಳ ಪ್ರಕಾರ ಅಳತೆ ಮಾಡಿ, ಪೆÇೀಡಿ ಮಾಡಿ ಕೊಡಲು ಅರ್ಜಿ ಸಲ್ಲಿಸಿದ್ದು, ಕೆಲಸ ಮಾಡಿಕೊಡಲು ಆಪಾದಿತನು 15,000 ರೂ.ಗಳ ಲಂಚದ ಹಣದ ಬೇಡಿಕೆ ಇಟ್ಟಿದರಿಂದಾಗಿ, ಆರೋಪಿ ರಾಘವೇಂದ್ರ ಶಂಕರರಾವ ಕುಲಕರ್ಣಿ, ಸರ್ವೆಯರ್, ಭೂ ಮಾಪನ ಇಲಾಖೆ ಕುಂದಗೋಳರವರ ವಿರುದ್ಧ ಧಾರವಾಡ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅದರಂತೆ ದಿನಾಂಕ: 03-06-2019 ರಂದು 16-00 ಗಂಟೆಗೆ ಕುಂದಗೋಳ ಕೆ.ಎಸ್.ಆರ್.ಟಿ.ಸಿ ಕ್ಯಾಂಟಿನ್ನಲ್ಲಿ ಆರೋಪಿತನು ಫಿರ್ಯಾದಿದಾರರಿಂದ ಲಂಚದ ಹಣ ರೂ. 15,000 ಗಳನ್ನು ಪಡೆದುಕೊಳ್ಳುವಾಗ ಯಶಸ್ವಿಯಾಗಿ ಟ್ರ್ಯಾಪ್ ಮಾಡಲಾಗಿತ್ತು.

ಆರೋಪಿತರ ಮೇಲೆ ಅಂದಿನ ತನಿಖಾಧಿಕಾರಿ ಬಿ.ಎ. ಜಾಧವ ಪೊಲೀಸ್ ಇನ್ಸಪೆಕ್ಟರ್ ರವರು ಪ್ರಕರಣದ ತನಿಖೆ ನಡೆಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.



ಧಾರವಾಡದ 03ನೇ ಅಧಿಕ ಜಿಲ್ಲಾ ಸತ್ರ ಹಾಗೂ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ಜರೀನಾ ಅವರು ಇಂದು ನ್ಯಾಯಾಲಯದಲ್ಲಿ ಆಪಾದಿತ ಅಧಿಕಾರಿ ರಾಘವೇಂದ್ರ ಶಂಕರರಾವ ಕುಲಕರ್ಣಿ, ಸರ್ವೆಯರ್, ಭೂ ಮಾಪನ ಇಲಾಖೆ ಕುಂದಗೋಳ ರವರಿಗೆ 04 ವರ್ಷಗಳ ಕಾರಾವಾಸ ಶಿಕ್ಷೆ ಹಾಗೂ ರೂ. 20,000/- ದಂಡ ವಿಧಿಸಿ ಆದೇಶಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಶ್ರೀ ಎಸ್ ಎಸ್ ಶಿವಳ್ಳಿಯವರು ಪ್ರಕರಣ ಕುರಿತು ವಾದ ಮಂಡಿಸಿದ್ದರು ಎಂದು ಕರ್ನಾಟಕ ಲೋಕಾಯುಕ್ತ ಧಾರವಾಡ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ