Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಹೆಚ್. ಡಿ ಕುಮಾರಸ್ವಾಮಿ


ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಿಗಿಂತಲೂ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ದೇಶದ ಹೆಮ್ಮೆಯ ಸಂಗತಿಯಾಗಿದ್ದು,



ಮಹಿಳೆಯರು ಮಹಿಳೆಯರಿಗಾಗಿ ಒತ್ತಾಸೆಯಾಗಿ ನಿಂತು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಹೆಚ್. ಡಿ ಕುಮಾರಸ್ವಾಮಿಯವರು ಹೇಳಿದರು.



ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟೀಯ ಗ್ರಾಮೀಣ ಜೀವನೋಪಾಯ ಮಿಷನ್, ಜಲಜೀವನ್ ಮಿಷನ್ ಮತ್ತು ಸ್ವಚ್ಛಭಾರತ್ ಮಿಷನ್ ವತಿಯಿಂದ ಇಂದು(ಏ. 😎 ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಘೋಷವಾಕ್ಯ: Accelerate Action ವೇಗವರ್ಧನೆಗಾಗಿ ಕ್ರಮಕೈಗೊಳ್ಳೋಣ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಗ್ರಾಮೀಣ ಪದ್ದತಿಯನ್ನು ಒಳಗೊಂಡಂತಹ ಹಾಗೂ ಆಧುನಿಕ ಸ್ಪರ್ಧೆಗಳನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ಜಿಲ್ಲೆಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದರು.



ಪ್ರತಿಯೊಂದು ಹಳ್ಳಿಗಳಲ್ಲಿ ಮಹಿಳೆಯರು ವಾರಕ್ಕೊಮ್ಮೆ ಗುಂಪು ಸೇರಿ ಸರ್ಕಾರದ ಯೋಜನೆಗಳ ಬಗ್ಗೆ ಚರ್ಚೆಯನ್ನು ನಡೆಸಿ ಅದರ ಬಗ್ಗೆ ಅರಿವು ಮೂಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾವು ಮಹಿಳೆಯರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಶೇ 100 ರಷ್ಟು ಪಡೆದುಕೊಳ್ಳಿ ಎಂದು ಮಹಿಳೆಯರಿಗೆ ಕಿವಿಮಾತು ಹೇಳಿದರು.



ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಕೃಷಿಕರಿಗೆ ನೀಡಿರುವ ಹಲವಾರು ಯೋಜನೆಗಳ ಸದ್ಭಳಕೆಯನ್ನು ಪಡೆದುಕೊಳ್ಳಿ. ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್, ಮುದ್ರಾ ಯೋಜನೆ, ನರೇಗಾ ಯೋಜನೆಗಳನ್ನು ಜಿಲ್ಲೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿ ಎಂದರು.



ಕೆಲವು ಅನಿವಾರ್ಯ ಸಂದರ್ಭಗಳಲ್ಲಿ ಹಾಗೂ ಕಷ್ಟದ ಸಂದರ್ಭದಲ್ಲಿ ಮಹಿಳೆಯರು ಸ್ತ್ರೀ ಶಕ್ತಿ ಸಂಘಗಳು ಮತ್ತು ಮೈಕ್ರೋ ಫೈನಾನ್ಸ್ ಗಳಂತ ಸಂಸ್ಥೆಗಳಲ್ಲಿ ಸಾಲ ಪಡೆಯಬೇಕಾಗುತ್ತದೆ. ಅದರೆ ಸಾಲ ಪಡೆಯುವಾಗ ಮತ್ತು ವ್ಯವಹಾರಿಸುವಾಗ ಎಚ್ಚರಿಕೆಯಿಂದಿರಬೇಕು‌. ಎಂದು ತಿಳುವಳಿಕೆಯನ್ನು ಹೇಳಿದರು.



ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ ಸನ್ಮಾನಿಸಿ ಗೌರವಿಸಲಾಯಿತು.



ಕಾರ್ಯಕ್ರಮದಲ್ಲಿ ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ. ಪ್ರಕಾಶ್,ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಶ್ರೀ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ