Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಲಾನಗರ-ಗಿಣಿಗೆರಾ ಕಾರ್ಖಾನೆಯಲ್ಲಿ ಅಪಘಾತ: ಇಲಾಖೆ ಅಧಿಕಾರಿಗಳ ಭೇಟಿ

ಕೊಪ್ಪಳ ಜನವರಿ 29  ಮೆ|| ಕಾಮಿನಿ ಐರನ್ & ಸ್ಟೀಲ್ ಎಲ್.ಎಲ್.ಪಿ ಸರ್ವೆ ಸಂ.-2 ಅಲ್ಲಾ ನಗರ ಗಿಣಿಗೆರಾ, ಕೊಪ್ಪಳ ಈ ಕಾರ್ಖಾನೆಯಲ್ಲಿ ಜನವರಿ 28ರಂದು ನಡೆದ ಮರಣಾಂತಿಕ ಅಪಘಾತದ ಹಿನ್ನೆಲೆಯಲ್ಲಿ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಅಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿದರು.

ಜ. 28 ರಂದು ಸುಮಾರು ಮಧ್ಯಾಹ್ನ 3.30 ಗಂಟೆಗೆ ಕೊಪ್ಪಳ ತಾಲ್ಲೂಕಿನ ಅಲ್ಲಾ ನಗರ ಗಿಣಿಗೆರಾದಲ್ಲಿ ಸ್ಥಾಪಿತವಾದ ಮೆ|| ಕಾಮಿನಿ ಐರನ್ & ಸ್ಟೀಲ್ ಎಲ್.ಎಲ್.ಪಿ ಘಟಕದಲ್ಲಿನ ಕಿಲನ್-1 ರ ಮೆಂಟೆನೆನ್ಸ್ ಕಾರ್ಯವನ್ನು ಜ. 16 ರಿಂದ ಕೈಗೊಂಡಿದ್ದು, ಅಪಘಾತದ ದಿನ ಕೊನೆಯ ಹಂತದ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಮಯದಲ್ಲಿ ಕಾರ್ಬನ್ ಮೊನಕ್ಸೈಡ್ ಗ್ಯಾಸ್ ಸೇವಿಸಿ ಒಬ್ಬ ಕಾರ್ಮಿಕ ಮೃತನಾಗಿದ್ದು ಮತ್ತೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿರುತ್ತದೆ. ಉಳಿದ 9 ಜನರಿಗೆ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಯಾವುದೇ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದು, ವೈದ್ಯರ ಸಲಹೆ ಮೇರೆಗೆ ಅವರನ್ನು 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ.

ಘಟನೆ ನಡೆದ ದಿನವೇ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಅಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ಮತ್ತು ತನಿಖೆ ಮಾಡಿ ಕ್ರಮ ತೆಗೆದುಕೊಂಡಿರುತ್ತಾರೆ. ಕಾರ್ಖಾನೆಯಲ್ಲಿನ ಸುರಕ್ಷತೆಯ ಕುರಿತು ಕ್ರಮ ತೆಗೆದುಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ಕ್ರಮ ಮತ್ತು ಸುರಕ್ಷತಾ ಆಡಿಟ್ ಮಾಡಿಸಿ ಕೊಪ್ಪಳ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿಗೆ ವರದಿ ಸಲ್ಲಿಸಲು ಸೂಚಿಸುತ್ತಾ ಉತ್ಪಾದನಾ ಕಾರ್ಯವನ್ನು ಸ್ಥಗಿತಗೊಳಿಸಲು “ನಿಷೇದಾಜ್ಞೆ ಆದೇಶ" ನೀಡಿರುತ್ತಾರೆ. ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ಮತ್ತು ಕೊಪ್ಪಳ ಜಿಲ್ಲಾ ಉಸುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿರವರು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶಿಸಿರುತ್ತಾರೆ ಮತ್ತು ಮೃತ ಕಾರ್ಮಿಕರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ದೊರಕಿಸಲು ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ.

ಕೊಪ್ಪಳ ಜಿಲ್ಲಾಡಳಿತವು ಭಾದಿತ ಕಾರ್ಮಿಕರ ಆರೋಗ್ಯ ಮತ್ತು ಕಾರ್ಖಾನೆಯಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಕಾರ್ಖಾನೆಗಳು, ಬಾಯ್ಲರುಗಳು, ಸುರಕ್ಷತಾ ಮತ್ತು ಸ್ವಾಸ್ಥ್ಯ ಇಲಾಖೆಯ ಹುಬ್ಬಳ್ಳಿ ವಲಯದ ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ರವೀಂದ್ರನಾಥ ಏನ್.ರಾಠೋಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ