Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಸಮಸ್ಯೆಗಳಿಗೆ ವರ್ತಕರು ಸ್ಪಂದಿಸಬೇಕು : ತಿಮ್ಮನಗೌಡರ ಕರೆ


ಕೃಷಿ ಪರಿಕರಗಳ ಮಾರಾಟಗಾರರ ನ್ಯಾಯಯುತ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ದೊರಕಿಸಿಕೊಡಲು ಶ್ರಮಿಸುವೆ ಎಂದು ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ತಿಮ್ಮನಗೌಡ ಅವರು ಭರವಸೆ ನೀಡಿದರು.

ಪಟ್ಟಣದಲ್ಲಿ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ತಾಲ್ಲೂಕು ಘಟಕದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೃಷಿ ಪರಿಕರಗಳ ಮಾರಾಟಗಾರರು ವಸ್ತುಗಳ ಉತ್ಪಾಧಕರಲ್ಲ. ಅವರು ಕೇವಲ ಮಾರಾಟಗಾರರು. ಆದರೂ ಕೆಲವು ಸಂದರ್ಭಗಳಲ್ಲಿ ರೈತರು ಮಾರಾಟಗಾರರ ಮೇಲೆ ಮುಗಿಬೀಳುತ್ತಾರೆ. ಆ ಸಂದರ್ಭದಲ್ಲಿ ಧೃತಿಗೆಡದೆ ದೈರ್ಯದಿಂದ ಸಮಸ್ಯೆ ಎದುರಿಸಬೇಕು. ನಿಜವಾಗಿ ರೈತರಿಗೆ ಅನ್ಯಾಯವಾಗಿದ್ದರೆ ಅವರಿಗೆ ನ್ಯಾಯದೊಕಿಸಿಕೊಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಘಟಕದ ನಿರ್ದೇಶಕರಾದ ಅರಿವಿ ಶರಣಪ್ಪ ಮತ್ತು ಹಾವಿನಹಾಳು ಶರಣಪ್ಪ ಮಾತನಾಡಿ, ಬೀಜ, ರಸಗೊಬ್ಬರ ಮತ್ತು ಕ್ರಿಮಿನಾಶ ವಸ್ತುಗಳಲ್ಲಿ ಉತ್ಪಾಧನಾ ಕೇಂದ್ರಗಳಲ್ಲಿಯೇ ಕೆಲವು ಸಂದರ್ಭದಲ್ಲಿ ದೋಷ ಕಂದಿರುತ್ತದೆ. ರೈತರು ಮಾರಾಟಗಾರರನ್ನು ಅಪರಾಧಿಗಳಾಗಿ ನೋಡುತ್ತಾರೆ. ಅಂಥ ಸಂದರ್ಭದಲ್ಲಿ ಜಿಲ್ಲಾ ಸಂಘ ವರ್ತಕರ ರಕ್ಷಣೆಗೆ ಬರಬೇಕು ಎಂದು ಮನವಿಮಾಡಿದರು.

ಸಿಂಧಿಗೇರಿ ಗಾದಿಲಿಂಗಪ್ಪ, ಅಗ್ರಿ ಎಂಪ್ಲಾಯಿಸ್ ಅಸೋಷಿಯೇಷನ್ ಜಿಲ್ಲಾ ಅಧ್ಯಕ್ಷ ಚವ್ಹಾಣ್ ಮಾತನಾಡಿದರು.                     

ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಕುರಿ ಹನುಮಣ್ಣ ಪ್ರಸ್ತಾವಿಕ ಮಾತನಾಡಿದರು. 

ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕದ ನಿರ್ದೇಶಕರಾದ ದೊಡ್ಡನಗೌಡ, ಸೋಮಲಾಪುರ ವೀರೇಶ್, ಚಾನಾಳು ರಾಮಣ್ಣ, ಅರಿವಿ ಶರಣಪ್ಪ, ಹಾವಿನಹಾಳ್ ಶರಣಪ್ಪ, ತಾಲ್ಲೂಕು ಅಧ್ಯಕ್ಷ ಸಿ.ಎಚ್. ಶೇಖರ್, ಸುರೇಶ್, ನಿರಂಜನ, ಸಾಗಪ್ಪ, ಗಾದಿಲಿಂಗಪ್ಪ ಮತ್ತು ಕೆ.ಸುರೇಶ್ ಇದ್ದರು.

ಕುರುಗೋಡಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ  ಕಾರ್ಯಕ್ರಮದಲ್ಲಿ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ತಿಮ್ಮನಗೌಡ ಮಾತನಾಡಿದರು
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು