Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ – ಪತ್ತೆಗೆ ಮನವಿ

ಬಳ್ಳಾರಿ,ಮೇ 21
ಸಂಡೂರು ತಾಲ್ಲೂಕಿನ ಸುಲ್ತಾನಪುರ ಗ್ರಾಮದ ನಿವಾಸಿ ಉಮಾದೇವಿ (34 ವರ್ಷ) ಹಾಗೂ ಅವರ ಮಕ್ಕಳಾದ ಜಯಶ್ರೀ (14 ವರ್ಷ), ನಾಗರತ್ನ (10 ವರ್ಷ) ಎಂಬುವವರು ಮೇ 15ರಂದು ಕಾಣೆಯಾಗಿದ್ದು, ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪ-ನಿರೀಕ್ಷಕರು ಮನವಿ ಮಾಡಿದ್ದಾರೆ.
*ನಾಪತ್ತೆಯಾದವರ ಚಹರೆ ಗುರುತು:*
*ಉಮಾದೇವಿ:* ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೊರಡುವಾಗ ಕಡು ನೀಲಿ ಬಣ್ಣದ ಸೀರೆ ಹಾಗೂ ಕುಪ್ಪಸ ಧರಿಸಿದ್ದರು. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.
*ಎಸ್.ಜಯಶ್ರೀ:* ದುಂಡು ಮುಖ, ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಪ್ರಾಕ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
*ಎಸ್.ನಾಗರತ್ನ:* ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಟಿ-ಶರ್ಟ್, ಕಂದು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಈ ಮಹಿಳೆ ಮತ್ತು ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಎಸ್.ಪಿ ಕಚೇರಿ ದೂ.08392-258100, ತೋರಣಗಲ್ಲು ಡಿ.ಎಸ್.ಪಿ ಮೊ.9480803010, ಕುರುಗೋಡು ವೃತ್ತ ಸಿಪಿಐ ಮೊ.9480803039, ಕುಡುತಿನಿ ಪೊಲೀಸ್ ಠಾಣೆಯ ಪಿಎಸ್‌ಐ ಮೊ.9480803078 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ