Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈ ಭಾರತ ಯುವ ಜನರನ್ನು ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಲು ಆಹ್ವಾನ





ಧಾರವಾಡ ಮೇ.13: ಯುವ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ ಕಾರ್ಯಕ್ರಮವು ದೇಶದಾದ್ಯಾಂತ ಯುವಕರನ್ನು ಮೈ ಭಾರತ ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಲು ಸಕ್ರಿಯವಾಗಿ ಪ್ರೇರೇಪಿಸುತ್ತಿದೆ. ದೇಶವ್ಯಾಪಿ ಆಹ್ವಾನವು ತುರ್ತು ಪರಿಸ್ಥಿತಿಗಳು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರೀಯ ಕಾರಣಕ್ಕಾಗಿ ಮಹತ್ವಪೂರ್ಣ ಪಾತ್ರವಹಿಸಲು ಯುವ ನಾಗರಿಕರನ್ನು ಸಶಕ್ತಗೊಳಿಸುವ ಉದ್ದೇಶವನ್ನು ಹೊಂದಿದೆ.



ಯೋಜನೆಯು ಉತ್ತಮ ತರಬೇತಿ ಪಡೆದ, ಸ್ಪಂದಿಸುವ ಮತ್ತು ಆತ್ಮ ಸ್ಥೈರ್ಯದಿಂದಿರುವ ಸ್ವಯಂಸೇವಕರ ದಳವನ್ನು ನಿರ್ಮಿಸುವ ಉದ್ದೇಶ ಹೊಂದಿದ್ದು, ನೈಸರ್ಗಿಕ ವಿಪತ್ತುಗಳು, ಅಪಘಾತಗಳು, ಸಾರ್ವಜನಿಕ ತುರ್ತು ಪರಿಸ್ಥಿತಿಗಳು ಮತ್ತು ಇತರ ಅನಿರೀಕ್ಷಿತ ಸಂದರ್ಭಗಳಲ್ಲಿ ನಾಗರಿಕ ಆಡಳಿತವನ್ನು ಪೂರಕವಾಗಿರುತ್ತದೆ.



ಪ್ರಸ್ತುತ ಪರಿಸ್ಥಿತಿ ಮತ್ತು ಉದಯೋನ್ಮುಖ ಸುರಕ್ಷತಾ ಚಿಂತನೆಗಳನ್ನು ಮನಗಂಡು, ಸಮುದಾಯ ಆಧಾರಿತ ಪ್ರತಿಕ್ರಿಯಾ ವ್ಯವಸ್ಥೆಯನ್ನು ಸ್ಥಾಪಿಸುವ ಅಗತ್ಯತೆಯು ಹೆಚ್ಚಾಗಿದೆ. ನಾಗರಿಕ ರಕ್ಷಣಾ ಸ್ವಯಂಸೇವಕರು ಈ ಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದು, ಸ್ಥಳೀಯ ಅಧಿಕಾರಿಗಳಿಗೆ ವಿವಿಧ ಸೇವೆಗಳ ಮೂಲಕ ಬೆಂಬಲ ನೀಡುತ್ತಾರೆ.



ರಕ್ಷಣೆ ಮತ್ತು ಸ್ಥಳಾಂತರ ಕಾರ್ಯಾಚರಣೆಗಳು, ಪ್ರಾಥಮಿಕ ಚಿಕಿತ್ಸೆ ಮತ್ತು ತುರ್ತು ಆರೈಕೆ, ಸಂಚಾರ ನಿರ್ವಹಣೆ, ಜನಸಮೂಹ ನಿಯಂತ್ರಣ, ಸಾರ್ವಜನಿಕ ಭದ್ರತೆ ಮತ್ತು ವಿಪತ್ತು ಪ್ರತಿಕ್ರಿಯೆ ಮತ್ತು ಪುನಶ್ಚೇತನ ಕಾರ್ಯಗಳಲ್ಲಿ ಸಹಾಯ ಮಾಡುವುದು ಒಳಗೊಂಡಿದೆ. ಸಿದ್ಧತೆಯುಳ್ಳ ಮತ್ತು ತರಬೇತಿಯಾದ ನಾಗರಿಕ ಪಡೆ ಇದ್ದು, ಮೈ ಭಾರತ ತನ್ನದಾದ ಕೊಡುಗೆ ನೀಡಲು ಬದ್ಧವಾಗಿದೆ.



ಮೈ ಭಾರತ ತನ್ನ ಚುರುಕಾದ ಯುವ ಸ್ವಯಂಸೇವಕರ ಜಾಲದೊಂದಿಗೆ ಜೊತೆಗೆ ಎಲ್ಲಾ ಉತ್ಸಾಹಭರಿತ ಯುವ ನಾಗರಿಕರನ್ನು ಈ ಮಹತ್ವದ ಕಾರ್ಯಕ್ಕಾಗಿ ಮುಂದೆ ಬಂದು ಮೈ ಭಾರತ ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಲು ಪ್ರಾರಂಭಿಸಲಾಗಿದೆ.



ಮೈ ಭಾರತ ಸ್ವಯಂಸೇವಕರು ಮತ್ತು ಜವಾಬ್ದಾರಿ ತೆಗೆದುಕೊಳ್ಳಲು ಆಸಕ್ತರು https://mybharat.gov.in ವೆಬ್ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ