Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈ ಭಾರತ ಯುವ ಜನರನ್ನು ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಲು ಆಹ್ವಾನ





ಧಾರವಾಡ ಮೇ.13: ಯುವ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ ಕಾರ್ಯಕ್ರಮವು ದೇಶದಾದ್ಯಾಂತ ಯುವಕರನ್ನು ಮೈ ಭಾರತ ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಲು ಸಕ್ರಿಯವಾಗಿ ಪ್ರೇರೇಪಿಸುತ್ತಿದೆ. ದೇಶವ್ಯಾಪಿ ಆಹ್ವಾನವು ತುರ್ತು ಪರಿಸ್ಥಿತಿಗಳು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರೀಯ ಕಾರಣಕ್ಕಾಗಿ ಮಹತ್ವಪೂರ್ಣ ಪಾತ್ರವಹಿಸಲು ಯುವ ನಾಗರಿಕರನ್ನು ಸಶಕ್ತಗೊಳಿಸುವ ಉದ್ದೇಶವನ್ನು ಹೊಂದಿದೆ.



ಯೋಜನೆಯು ಉತ್ತಮ ತರಬೇತಿ ಪಡೆದ, ಸ್ಪಂದಿಸುವ ಮತ್ತು ಆತ್ಮ ಸ್ಥೈರ್ಯದಿಂದಿರುವ ಸ್ವಯಂಸೇವಕರ ದಳವನ್ನು ನಿರ್ಮಿಸುವ ಉದ್ದೇಶ ಹೊಂದಿದ್ದು, ನೈಸರ್ಗಿಕ ವಿಪತ್ತುಗಳು, ಅಪಘಾತಗಳು, ಸಾರ್ವಜನಿಕ ತುರ್ತು ಪರಿಸ್ಥಿತಿಗಳು ಮತ್ತು ಇತರ ಅನಿರೀಕ್ಷಿತ ಸಂದರ್ಭಗಳಲ್ಲಿ ನಾಗರಿಕ ಆಡಳಿತವನ್ನು ಪೂರಕವಾಗಿರುತ್ತದೆ.



ಪ್ರಸ್ತುತ ಪರಿಸ್ಥಿತಿ ಮತ್ತು ಉದಯೋನ್ಮುಖ ಸುರಕ್ಷತಾ ಚಿಂತನೆಗಳನ್ನು ಮನಗಂಡು, ಸಮುದಾಯ ಆಧಾರಿತ ಪ್ರತಿಕ್ರಿಯಾ ವ್ಯವಸ್ಥೆಯನ್ನು ಸ್ಥಾಪಿಸುವ ಅಗತ್ಯತೆಯು ಹೆಚ್ಚಾಗಿದೆ. ನಾಗರಿಕ ರಕ್ಷಣಾ ಸ್ವಯಂಸೇವಕರು ಈ ಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದು, ಸ್ಥಳೀಯ ಅಧಿಕಾರಿಗಳಿಗೆ ವಿವಿಧ ಸೇವೆಗಳ ಮೂಲಕ ಬೆಂಬಲ ನೀಡುತ್ತಾರೆ.



ರಕ್ಷಣೆ ಮತ್ತು ಸ್ಥಳಾಂತರ ಕಾರ್ಯಾಚರಣೆಗಳು, ಪ್ರಾಥಮಿಕ ಚಿಕಿತ್ಸೆ ಮತ್ತು ತುರ್ತು ಆರೈಕೆ, ಸಂಚಾರ ನಿರ್ವಹಣೆ, ಜನಸಮೂಹ ನಿಯಂತ್ರಣ, ಸಾರ್ವಜನಿಕ ಭದ್ರತೆ ಮತ್ತು ವಿಪತ್ತು ಪ್ರತಿಕ್ರಿಯೆ ಮತ್ತು ಪುನಶ್ಚೇತನ ಕಾರ್ಯಗಳಲ್ಲಿ ಸಹಾಯ ಮಾಡುವುದು ಒಳಗೊಂಡಿದೆ. ಸಿದ್ಧತೆಯುಳ್ಳ ಮತ್ತು ತರಬೇತಿಯಾದ ನಾಗರಿಕ ಪಡೆ ಇದ್ದು, ಮೈ ಭಾರತ ತನ್ನದಾದ ಕೊಡುಗೆ ನೀಡಲು ಬದ್ಧವಾಗಿದೆ.



ಮೈ ಭಾರತ ತನ್ನ ಚುರುಕಾದ ಯುವ ಸ್ವಯಂಸೇವಕರ ಜಾಲದೊಂದಿಗೆ ಜೊತೆಗೆ ಎಲ್ಲಾ ಉತ್ಸಾಹಭರಿತ ಯುವ ನಾಗರಿಕರನ್ನು ಈ ಮಹತ್ವದ ಕಾರ್ಯಕ್ಕಾಗಿ ಮುಂದೆ ಬಂದು ಮೈ ಭಾರತ ನಾಗರಿಕ ರಕ್ಷಣಾ ಸ್ವಯಂಸೇವಕರಾಗಿ ನೋಂದಾಯಿಸಿಕೊಳ್ಳಲು ಪ್ರಾರಂಭಿಸಲಾಗಿದೆ.



ಮೈ ಭಾರತ ಸ್ವಯಂಸೇವಕರು ಮತ್ತು ಜವಾಬ್ದಾರಿ ತೆಗೆದುಕೊಳ್ಳಲು ಆಸಕ್ತರು https://mybharat.gov.in ವೆಬ್ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು